ಮೈಸೂರು

ಮೈಸೂರು ದಸರಾ| ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆ: ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರು : ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದೆ. ರಾಜ ವಂಶಸ್ಥರ ಶರನ್ನವರಾತ್ರಿ ಆಚರಣೆಗಳು ಅರಮನೆಯಲ್ಲಿ ನಡೆಯುವುದರಿಂದ ಕೆಲ ದಿನಗಳಲ್ಲಿ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ ಮಾಡಲಾಗಿದೆ ಎಂದು ಮೈಸೂರು ಅರಮನೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ ವಂಶಸ್ಥರ ಶರನ್ನವರಾತ್ರಿಯ ಸಾಂಪ್ರದಾಯಿಕ ಆಚರಣೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ನಡೆಯುವುದರಿಂದ ಬೆಳಗ್ಗೆ 10 ರಿಂದ ಮಧ್ಯಾಹ್ನದವರೆಗೆ ಅರಮನೆಗೆ ಪ್ರವಾಸಿಗರ ನಿರ್ಬಂಧ ವಿಧಿಸಲಾಗಿದೆ.

ಇದರ ಜೊತೆಗೆ, ಅಕ್ಟೋಬರ್ 15 ರಂದು ಶರನ್ನವರಾತ್ರಿಯ ಮೊದಲ ದಿನ ಖಾಸಗಿ ದರ್ಬಾರ್ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಅರಮನೆಯ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗೆಯೇ, ಅಕ್ಟೋಬರ್ 23 ರಂದು ಆಯುಧ ಪೂಜೆ ಇರುವುದರಿಂದ 10 ರಿಂದ 2 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.

ಜಂಬೂ ಸವಾರಿಯ ಇಡೀ ದಿನ ಅರಮನೆ ಪ್ರವೇಶಕ್ಕೆ ನಿರ್ಬಂಧ : ಅಕ್ಟೋಬರ್ 24 ರ ವಿಜಯದಶಮಿ ದಿನ ಬೆಳಗ್ಗೆ ಅರಮನೆಯಲ್ಲಿ ಮೆರವಣಿಗೆ ನಡೆಯಲಿದ್ದು, ಆನಂತರ ಮಧ್ಯಾಹ್ನ ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆ ಇರುವ ನಿಮಿತ್ತ ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧ ಮಾಡಲಾಗಿದೆ. ಪಾಸ್ ಇದ್ದವರು ಅರಮನೆಯ ಅಂಗಳದಲ್ಲಿ ಜಂಬೂ ಸವಾರಿ ವೀಕ್ಷಣೆ ಮಾಡಬಹುದು ಎಂದು ತಿಳಿಸಲಾಗಿದೆ.

ಇದರ ಜೊತೆಗೆ, ನವೆಂಬರ್ 8 ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ 2 ಗಂಟೆಯವರೆಗೆ ಅರಮನೆಯ ಪ್ರವೇಶವನ್ನು ನಿಷೇಧ ಮಾಡಲಾಗಿದೆ ಎಂದು ಅರಮನೆಯ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಒಟ್ಟಾರೆ, ರಾಜವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ನಡೆಸುವ ರಾಜ ಪರಂಪರೆಯ ಶರನ್ನವರಾತ್ರಿಯ ಪೂಜಾ ಕಾರ್ಯಕ್ರಮಗಳಿಗೆ ಈಗಿನಿಂದಲೇ ತಯಾರಿ ಪ್ರಾರಂಭವಾಗಿದೆ. ರತ್ನಖಚಿತ ಸಿಂಹಾಸನ ಜೋಡಣೆ, ಖಾಸಗಿ ದರ್ಬಾರ್, ಅರಮನೆಯಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ದಿನದಂದು ರಾಜ ಪರಂಪರೆಯಂತೆ ಶರನ್ನವರಾತ್ರಿಯ ಪೂಜಾ ಕಾರ್ಯ ನೆರವೇರಿಸಲಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago