ಮೈಸೂರು

ಮೈಸೂರು ದಸರಾ: ಇದ್ದಕ್ಕಿದ್ದಂತೆ ಮುರಿದುಬಿದ್ದ ವಿದ್ಯುತ್ ದೀಪಾಲಂಕಾರದ ಕಮಾನು!

ಮೈಸೂರು : ಇತಿಹಾಸ ಪ್ರಸಿದ್ಧ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಮೈಸೂರು ದಸರಾ ಎಂದಿನಂತೆ ಕಳೆ ಇಲ್ಲದಾಗಿ. ಒಂದು ಮೈಸೂರು ಕಡೆ ದಸರಾ ಇನ್ನೊಂದೆಡೆ ಅದಕ್ಕೆ ವಿರುದ್ಧವಾಗಿ ಮಹಿಷಾ ದಸರಾ, ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧ, ಮೈಸೂರು ನಗರಾದ್ಯಂತ 144 ಸೆಕ್ಷನ್ ಜಾರಿ ಇವೆಲ್ಲವುಗಳ ನಡುವೆ ಅವಘಡ ಸಂಭವಿಸಿದೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಹಾಕಲಾಗಿದ್ದ ವಿದ್ಯುತ್ ದೀಪಾಲಂಕಾರದ ಕಮಾನು ಇದ್ದಕ್ಕಿದ್ದಂತೆ ಮುರಿದುಬಿದ್ದಿದೆ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಕಮಾನು ಮುರಿದು ಬಸ್‌ಗಳ ಮೇಲೆ ಬಿದ್ದು ಗಾಜುಗಳು ಪುಡಿಪುಡಿಯಾಗಿವೆ. ಕೆಎಸ್‌ಆರ್‌ಪಿ ಹಾಗೂ ಖಾಸಗಿ ಬಸ್‌ಗಳು ಜಖಂಗೊಂಡಿವೆ. ಘಟನೆಯಿಂದ ಟ್ರಾಫಿಕ್ ಜಾಮ್ ಆಗಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕುಂಟಾಯಿತು.

ಕೆಎಸ್‌ಆರ್‌ಟಿಸಿ ಬಸ್ ಅಪಘಾತ 20ಕ್ಕೂ ಹೆಚ್ಚು ಮಂದಿಗೆ ಗಾಯ ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೈಸೂರಿನ ಮಣಿಪಾಲ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದೆ.

ಬಸ್ ನಿಯಂತ್ರಿಸುವ ಧಾವಂತದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಡಿಕ್ಕಿಯಾದ ಖಾಸಗಿ ಬಸ್. ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೂ ಡಿಕ್ಕಿ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಮಣಿಪಾಲ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯಕ್ಕೆ ರವಾನಿಸಿದ ಪೊಲೀಸರು. ಸ್ಥಳದಲ್ಲಿ ಟ್ರಾಫಿಕ್ ಜಾಮ್.

andolanait

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

10 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

32 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

1 hour ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago