ಮೈಸೂರು

ಮೈಸೂರು ದಸರಾ: ಇದ್ದಕ್ಕಿದ್ದಂತೆ ಮುರಿದುಬಿದ್ದ ವಿದ್ಯುತ್ ದೀಪಾಲಂಕಾರದ ಕಮಾನು!

ಮೈಸೂರು : ಇತಿಹಾಸ ಪ್ರಸಿದ್ಧ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಮೈಸೂರು ದಸರಾ ಎಂದಿನಂತೆ ಕಳೆ ಇಲ್ಲದಾಗಿ. ಒಂದು ಮೈಸೂರು ಕಡೆ ದಸರಾ ಇನ್ನೊಂದೆಡೆ ಅದಕ್ಕೆ ವಿರುದ್ಧವಾಗಿ ಮಹಿಷಾ ದಸರಾ, ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧ, ಮೈಸೂರು ನಗರಾದ್ಯಂತ 144 ಸೆಕ್ಷನ್ ಜಾರಿ ಇವೆಲ್ಲವುಗಳ ನಡುವೆ ಅವಘಡ ಸಂಭವಿಸಿದೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಹಾಕಲಾಗಿದ್ದ ವಿದ್ಯುತ್ ದೀಪಾಲಂಕಾರದ ಕಮಾನು ಇದ್ದಕ್ಕಿದ್ದಂತೆ ಮುರಿದುಬಿದ್ದಿದೆ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಕಮಾನು ಮುರಿದು ಬಸ್‌ಗಳ ಮೇಲೆ ಬಿದ್ದು ಗಾಜುಗಳು ಪುಡಿಪುಡಿಯಾಗಿವೆ. ಕೆಎಸ್‌ಆರ್‌ಪಿ ಹಾಗೂ ಖಾಸಗಿ ಬಸ್‌ಗಳು ಜಖಂಗೊಂಡಿವೆ. ಘಟನೆಯಿಂದ ಟ್ರಾಫಿಕ್ ಜಾಮ್ ಆಗಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕುಂಟಾಯಿತು.

ಕೆಎಸ್‌ಆರ್‌ಟಿಸಿ ಬಸ್ ಅಪಘಾತ 20ಕ್ಕೂ ಹೆಚ್ಚು ಮಂದಿಗೆ ಗಾಯ ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೈಸೂರಿನ ಮಣಿಪಾಲ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದೆ.

ಬಸ್ ನಿಯಂತ್ರಿಸುವ ಧಾವಂತದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಡಿಕ್ಕಿಯಾದ ಖಾಸಗಿ ಬಸ್. ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೂ ಡಿಕ್ಕಿ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಮಣಿಪಾಲ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯಕ್ಕೆ ರವಾನಿಸಿದ ಪೊಲೀಸರು. ಸ್ಥಳದಲ್ಲಿ ಟ್ರಾಫಿಕ್ ಜಾಮ್.

andolanait

Recent Posts

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

5 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

5 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

5 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

5 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

5 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

5 hours ago