ಮೈಸೂರು

ಮೈಸೂರು ದಸರಾ : ಪ್ರವಾಸಿಗರಿಗೆ ಚಿನ್ನದ ಸಿಂಹಾಸನ ದರ್ಶನ ಭಾಗ್ಯ

ಮೈಸೂರು : ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ ತೆಗೆಯುವುದನ್ನು ನಿರ್ಬಂಧಿಸಲಾಗಿದೆ.

ಅಕ್ಟೋಬರ್ 9ರಂದು ಅರಮನೆಯ ಖಾಸಗಿ ದರ್ಬಾರ್ ಹಾಲ್​ನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಂಹಾಸನ ಜೋಡಣೆ ಕಾರ್ಯ ನಡೆದಿದೆ. ಸಿಂಹಾಸನಕ್ಕೆ ಪ್ರತ್ಯೇಕ ಪರದೆ ಅಳವಡಿಸಿ ಮುಚ್ಚಲಾಗಿದ್ದು, ಪರದೆಯ ಒಳ ಹೋಗಿ ಸಿಂಹಾಸನ ನೋಡಲು ಪ್ರವಾಸಿಗರಿಗೆ 50 ರೂಪಾಯಿ ಟಿಕೆಟ್ ನಿಗದಿಪಡಿಸಲಾಗಿದೆ.ಅರಮನೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಇದ್ದು, ದರ್ಬಾರ್ ಹಾಲ್​ನಲ್ಲಿ ಅರಮನೆ ಆಡಳಿತ ಮಂಡಳಿ ಭದ್ರತೆಗೆ ಹಾಕಿರುವ ಸಿಸಿಟಿವಿಯನ್ನೂ ಮುಚ್ಚಲಾಗಿದೆ. ಇಂದಿನಿಂದ ನವೆಂಬರ್ 7ರ ವರೆಗೆ ಸಿಂಹಾಸನವನ್ನು ಪ್ರವಾಸಿಗರು ವೀಕ್ಷಿಸಲು ಅವಕಾಶವಿದೆ. ಇದಕ್ಕಾಗಿ ದರ್ಬಾರ್ ಹಾಲ್​ನಲ್ಲಿ ರಾಜವಂಶಸ್ಥರ ಕಡೆಯಿಂದ ವಿಶೇಷ ಕೌಂಟರ್ ಕೂಡಾ ತೆರೆಯಲಾಗಿದೆ.

ಈ ಸಿಂಹಾಸನಕ್ಕೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ರಾಜವಂಶಸ್ಥರಿಂದ ಪೂಜೆ ನಡೆಯುತ್ತದೆ. ವಿಶಿಷ್ಟ ಆಕಾರದಲ್ಲಿರುವ ಭವ್ಯ ಸಿಂಹಾಸನದ ಕೆಳ ಭಾಗದ 4 ಕಡೆ ಕುದುರೆಗಳ ಲಾಂಛನ, ಸಿಂಹಾಸನಕ್ಕಿರುವ ಮೆಟ್ಟಿಲುಗಳಲ್ಲಿ ರಾಜ ಪರಂಪರೆಯ ಸಿಂಹ ಲಾಂಛನ, ಮೆಟ್ಟಿಲುಗಳ ಮೇಲೆ ಹೊದಿಕೆಯಾಕಾರದ ರಾಜಪರಂಪರೆಯ ಚಿನ್ನದ ಲಾಂಛನಗಳು, ರಾಜರು ಕುಳಿತುಕೊಳ್ಳುವ ಹಿಂಭಾಗದಲ್ಲಿ ರಾಜ ಲಾಂಛನ ಗಂಡಬೇರುಂಡ, ಚಿನ್ನದ ಛತ್ರಿ ಹಾಗೂ ಛತ್ರಿಯ ಮೇಲಿನ ಭಾಗದಲ್ಲಿ ನವಿಲಿನ ಆಕಾರ, ನವಿಲಿನ ಕಣ್ಣುಗಳಲ್ಲಿ ಅಪರೂಪದ ವಜ್ರದ ಹರಳುಗಳಿವೆ.ರಾಜವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಈ ಸಿಂಹಾಸನವನ್ನು ನಿನ್ನೆ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಗಿತ್ತು.

 

lokesh

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

9 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

10 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

10 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

13 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

14 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

14 hours ago