ಮೈಸೂರು

ಮೈಸೂರು ದಸರಾ : ಪ್ರವಾಸಿಗರಿಗೆ ಚಿನ್ನದ ಸಿಂಹಾಸನ ದರ್ಶನ ಭಾಗ್ಯ

ಮೈಸೂರು : ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ ತೆಗೆಯುವುದನ್ನು ನಿರ್ಬಂಧಿಸಲಾಗಿದೆ.

ಅಕ್ಟೋಬರ್ 9ರಂದು ಅರಮನೆಯ ಖಾಸಗಿ ದರ್ಬಾರ್ ಹಾಲ್​ನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಂಹಾಸನ ಜೋಡಣೆ ಕಾರ್ಯ ನಡೆದಿದೆ. ಸಿಂಹಾಸನಕ್ಕೆ ಪ್ರತ್ಯೇಕ ಪರದೆ ಅಳವಡಿಸಿ ಮುಚ್ಚಲಾಗಿದ್ದು, ಪರದೆಯ ಒಳ ಹೋಗಿ ಸಿಂಹಾಸನ ನೋಡಲು ಪ್ರವಾಸಿಗರಿಗೆ 50 ರೂಪಾಯಿ ಟಿಕೆಟ್ ನಿಗದಿಪಡಿಸಲಾಗಿದೆ.ಅರಮನೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಇದ್ದು, ದರ್ಬಾರ್ ಹಾಲ್​ನಲ್ಲಿ ಅರಮನೆ ಆಡಳಿತ ಮಂಡಳಿ ಭದ್ರತೆಗೆ ಹಾಕಿರುವ ಸಿಸಿಟಿವಿಯನ್ನೂ ಮುಚ್ಚಲಾಗಿದೆ. ಇಂದಿನಿಂದ ನವೆಂಬರ್ 7ರ ವರೆಗೆ ಸಿಂಹಾಸನವನ್ನು ಪ್ರವಾಸಿಗರು ವೀಕ್ಷಿಸಲು ಅವಕಾಶವಿದೆ. ಇದಕ್ಕಾಗಿ ದರ್ಬಾರ್ ಹಾಲ್​ನಲ್ಲಿ ರಾಜವಂಶಸ್ಥರ ಕಡೆಯಿಂದ ವಿಶೇಷ ಕೌಂಟರ್ ಕೂಡಾ ತೆರೆಯಲಾಗಿದೆ.

ಈ ಸಿಂಹಾಸನಕ್ಕೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ರಾಜವಂಶಸ್ಥರಿಂದ ಪೂಜೆ ನಡೆಯುತ್ತದೆ. ವಿಶಿಷ್ಟ ಆಕಾರದಲ್ಲಿರುವ ಭವ್ಯ ಸಿಂಹಾಸನದ ಕೆಳ ಭಾಗದ 4 ಕಡೆ ಕುದುರೆಗಳ ಲಾಂಛನ, ಸಿಂಹಾಸನಕ್ಕಿರುವ ಮೆಟ್ಟಿಲುಗಳಲ್ಲಿ ರಾಜ ಪರಂಪರೆಯ ಸಿಂಹ ಲಾಂಛನ, ಮೆಟ್ಟಿಲುಗಳ ಮೇಲೆ ಹೊದಿಕೆಯಾಕಾರದ ರಾಜಪರಂಪರೆಯ ಚಿನ್ನದ ಲಾಂಛನಗಳು, ರಾಜರು ಕುಳಿತುಕೊಳ್ಳುವ ಹಿಂಭಾಗದಲ್ಲಿ ರಾಜ ಲಾಂಛನ ಗಂಡಬೇರುಂಡ, ಚಿನ್ನದ ಛತ್ರಿ ಹಾಗೂ ಛತ್ರಿಯ ಮೇಲಿನ ಭಾಗದಲ್ಲಿ ನವಿಲಿನ ಆಕಾರ, ನವಿಲಿನ ಕಣ್ಣುಗಳಲ್ಲಿ ಅಪರೂಪದ ವಜ್ರದ ಹರಳುಗಳಿವೆ.ರಾಜವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಈ ಸಿಂಹಾಸನವನ್ನು ನಿನ್ನೆ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಗಿತ್ತು.

 

lokesh

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

2 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

3 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

4 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

4 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

4 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 hours ago