ಮೈಸೂರು

ಮೈಸೂರು ದಸರಾ : ಪ್ರವಾಸಿಗರಿಗೆ ಚಿನ್ನದ ಸಿಂಹಾಸನ ದರ್ಶನ ಭಾಗ್ಯ

ಮೈಸೂರು : ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ ತೆಗೆಯುವುದನ್ನು ನಿರ್ಬಂಧಿಸಲಾಗಿದೆ.

ಅಕ್ಟೋಬರ್ 9ರಂದು ಅರಮನೆಯ ಖಾಸಗಿ ದರ್ಬಾರ್ ಹಾಲ್​ನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಂಹಾಸನ ಜೋಡಣೆ ಕಾರ್ಯ ನಡೆದಿದೆ. ಸಿಂಹಾಸನಕ್ಕೆ ಪ್ರತ್ಯೇಕ ಪರದೆ ಅಳವಡಿಸಿ ಮುಚ್ಚಲಾಗಿದ್ದು, ಪರದೆಯ ಒಳ ಹೋಗಿ ಸಿಂಹಾಸನ ನೋಡಲು ಪ್ರವಾಸಿಗರಿಗೆ 50 ರೂಪಾಯಿ ಟಿಕೆಟ್ ನಿಗದಿಪಡಿಸಲಾಗಿದೆ.ಅರಮನೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಇದ್ದು, ದರ್ಬಾರ್ ಹಾಲ್​ನಲ್ಲಿ ಅರಮನೆ ಆಡಳಿತ ಮಂಡಳಿ ಭದ್ರತೆಗೆ ಹಾಕಿರುವ ಸಿಸಿಟಿವಿಯನ್ನೂ ಮುಚ್ಚಲಾಗಿದೆ. ಇಂದಿನಿಂದ ನವೆಂಬರ್ 7ರ ವರೆಗೆ ಸಿಂಹಾಸನವನ್ನು ಪ್ರವಾಸಿಗರು ವೀಕ್ಷಿಸಲು ಅವಕಾಶವಿದೆ. ಇದಕ್ಕಾಗಿ ದರ್ಬಾರ್ ಹಾಲ್​ನಲ್ಲಿ ರಾಜವಂಶಸ್ಥರ ಕಡೆಯಿಂದ ವಿಶೇಷ ಕೌಂಟರ್ ಕೂಡಾ ತೆರೆಯಲಾಗಿದೆ.

ಈ ಸಿಂಹಾಸನಕ್ಕೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ರಾಜವಂಶಸ್ಥರಿಂದ ಪೂಜೆ ನಡೆಯುತ್ತದೆ. ವಿಶಿಷ್ಟ ಆಕಾರದಲ್ಲಿರುವ ಭವ್ಯ ಸಿಂಹಾಸನದ ಕೆಳ ಭಾಗದ 4 ಕಡೆ ಕುದುರೆಗಳ ಲಾಂಛನ, ಸಿಂಹಾಸನಕ್ಕಿರುವ ಮೆಟ್ಟಿಲುಗಳಲ್ಲಿ ರಾಜ ಪರಂಪರೆಯ ಸಿಂಹ ಲಾಂಛನ, ಮೆಟ್ಟಿಲುಗಳ ಮೇಲೆ ಹೊದಿಕೆಯಾಕಾರದ ರಾಜಪರಂಪರೆಯ ಚಿನ್ನದ ಲಾಂಛನಗಳು, ರಾಜರು ಕುಳಿತುಕೊಳ್ಳುವ ಹಿಂಭಾಗದಲ್ಲಿ ರಾಜ ಲಾಂಛನ ಗಂಡಬೇರುಂಡ, ಚಿನ್ನದ ಛತ್ರಿ ಹಾಗೂ ಛತ್ರಿಯ ಮೇಲಿನ ಭಾಗದಲ್ಲಿ ನವಿಲಿನ ಆಕಾರ, ನವಿಲಿನ ಕಣ್ಣುಗಳಲ್ಲಿ ಅಪರೂಪದ ವಜ್ರದ ಹರಳುಗಳಿವೆ.ರಾಜವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಈ ಸಿಂಹಾಸನವನ್ನು ನಿನ್ನೆ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಗಿತ್ತು.

 

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago