ಮೈಸೂರು

ಮೈಸೂರು ದಸರಾ : ಪ್ರವಾಸಿಗರಿಗೆ ಚಿನ್ನದ ಸಿಂಹಾಸನ ದರ್ಶನ ಭಾಗ್ಯ

ಮೈಸೂರು : ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ ತೆಗೆಯುವುದನ್ನು ನಿರ್ಬಂಧಿಸಲಾಗಿದೆ.

ಅಕ್ಟೋಬರ್ 9ರಂದು ಅರಮನೆಯ ಖಾಸಗಿ ದರ್ಬಾರ್ ಹಾಲ್​ನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಂಹಾಸನ ಜೋಡಣೆ ಕಾರ್ಯ ನಡೆದಿದೆ. ಸಿಂಹಾಸನಕ್ಕೆ ಪ್ರತ್ಯೇಕ ಪರದೆ ಅಳವಡಿಸಿ ಮುಚ್ಚಲಾಗಿದ್ದು, ಪರದೆಯ ಒಳ ಹೋಗಿ ಸಿಂಹಾಸನ ನೋಡಲು ಪ್ರವಾಸಿಗರಿಗೆ 50 ರೂಪಾಯಿ ಟಿಕೆಟ್ ನಿಗದಿಪಡಿಸಲಾಗಿದೆ.ಅರಮನೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಇದ್ದು, ದರ್ಬಾರ್ ಹಾಲ್​ನಲ್ಲಿ ಅರಮನೆ ಆಡಳಿತ ಮಂಡಳಿ ಭದ್ರತೆಗೆ ಹಾಕಿರುವ ಸಿಸಿಟಿವಿಯನ್ನೂ ಮುಚ್ಚಲಾಗಿದೆ. ಇಂದಿನಿಂದ ನವೆಂಬರ್ 7ರ ವರೆಗೆ ಸಿಂಹಾಸನವನ್ನು ಪ್ರವಾಸಿಗರು ವೀಕ್ಷಿಸಲು ಅವಕಾಶವಿದೆ. ಇದಕ್ಕಾಗಿ ದರ್ಬಾರ್ ಹಾಲ್​ನಲ್ಲಿ ರಾಜವಂಶಸ್ಥರ ಕಡೆಯಿಂದ ವಿಶೇಷ ಕೌಂಟರ್ ಕೂಡಾ ತೆರೆಯಲಾಗಿದೆ.

ಈ ಸಿಂಹಾಸನಕ್ಕೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ರಾಜವಂಶಸ್ಥರಿಂದ ಪೂಜೆ ನಡೆಯುತ್ತದೆ. ವಿಶಿಷ್ಟ ಆಕಾರದಲ್ಲಿರುವ ಭವ್ಯ ಸಿಂಹಾಸನದ ಕೆಳ ಭಾಗದ 4 ಕಡೆ ಕುದುರೆಗಳ ಲಾಂಛನ, ಸಿಂಹಾಸನಕ್ಕಿರುವ ಮೆಟ್ಟಿಲುಗಳಲ್ಲಿ ರಾಜ ಪರಂಪರೆಯ ಸಿಂಹ ಲಾಂಛನ, ಮೆಟ್ಟಿಲುಗಳ ಮೇಲೆ ಹೊದಿಕೆಯಾಕಾರದ ರಾಜಪರಂಪರೆಯ ಚಿನ್ನದ ಲಾಂಛನಗಳು, ರಾಜರು ಕುಳಿತುಕೊಳ್ಳುವ ಹಿಂಭಾಗದಲ್ಲಿ ರಾಜ ಲಾಂಛನ ಗಂಡಬೇರುಂಡ, ಚಿನ್ನದ ಛತ್ರಿ ಹಾಗೂ ಛತ್ರಿಯ ಮೇಲಿನ ಭಾಗದಲ್ಲಿ ನವಿಲಿನ ಆಕಾರ, ನವಿಲಿನ ಕಣ್ಣುಗಳಲ್ಲಿ ಅಪರೂಪದ ವಜ್ರದ ಹರಳುಗಳಿವೆ.ರಾಜವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಈ ಸಿಂಹಾಸನವನ್ನು ನಿನ್ನೆ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಗಿತ್ತು.

 

lokesh

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

23 mins ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

43 mins ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

1 hour ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

2 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

3 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

3 hours ago