ಮೈಸೂರು

ಮೈಸೂರು ದಸರಾ : ಪ್ರವಾಸಿಗರಿಗೆ ಚಿನ್ನದ ಸಿಂಹಾಸನ ದರ್ಶನ ಭಾಗ್ಯ

ಮೈಸೂರು : ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ ತೆಗೆಯುವುದನ್ನು ನಿರ್ಬಂಧಿಸಲಾಗಿದೆ.

ಅಕ್ಟೋಬರ್ 9ರಂದು ಅರಮನೆಯ ಖಾಸಗಿ ದರ್ಬಾರ್ ಹಾಲ್​ನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಂಹಾಸನ ಜೋಡಣೆ ಕಾರ್ಯ ನಡೆದಿದೆ. ಸಿಂಹಾಸನಕ್ಕೆ ಪ್ರತ್ಯೇಕ ಪರದೆ ಅಳವಡಿಸಿ ಮುಚ್ಚಲಾಗಿದ್ದು, ಪರದೆಯ ಒಳ ಹೋಗಿ ಸಿಂಹಾಸನ ನೋಡಲು ಪ್ರವಾಸಿಗರಿಗೆ 50 ರೂಪಾಯಿ ಟಿಕೆಟ್ ನಿಗದಿಪಡಿಸಲಾಗಿದೆ.ಅರಮನೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಇದ್ದು, ದರ್ಬಾರ್ ಹಾಲ್​ನಲ್ಲಿ ಅರಮನೆ ಆಡಳಿತ ಮಂಡಳಿ ಭದ್ರತೆಗೆ ಹಾಕಿರುವ ಸಿಸಿಟಿವಿಯನ್ನೂ ಮುಚ್ಚಲಾಗಿದೆ. ಇಂದಿನಿಂದ ನವೆಂಬರ್ 7ರ ವರೆಗೆ ಸಿಂಹಾಸನವನ್ನು ಪ್ರವಾಸಿಗರು ವೀಕ್ಷಿಸಲು ಅವಕಾಶವಿದೆ. ಇದಕ್ಕಾಗಿ ದರ್ಬಾರ್ ಹಾಲ್​ನಲ್ಲಿ ರಾಜವಂಶಸ್ಥರ ಕಡೆಯಿಂದ ವಿಶೇಷ ಕೌಂಟರ್ ಕೂಡಾ ತೆರೆಯಲಾಗಿದೆ.

ಈ ಸಿಂಹಾಸನಕ್ಕೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ರಾಜವಂಶಸ್ಥರಿಂದ ಪೂಜೆ ನಡೆಯುತ್ತದೆ. ವಿಶಿಷ್ಟ ಆಕಾರದಲ್ಲಿರುವ ಭವ್ಯ ಸಿಂಹಾಸನದ ಕೆಳ ಭಾಗದ 4 ಕಡೆ ಕುದುರೆಗಳ ಲಾಂಛನ, ಸಿಂಹಾಸನಕ್ಕಿರುವ ಮೆಟ್ಟಿಲುಗಳಲ್ಲಿ ರಾಜ ಪರಂಪರೆಯ ಸಿಂಹ ಲಾಂಛನ, ಮೆಟ್ಟಿಲುಗಳ ಮೇಲೆ ಹೊದಿಕೆಯಾಕಾರದ ರಾಜಪರಂಪರೆಯ ಚಿನ್ನದ ಲಾಂಛನಗಳು, ರಾಜರು ಕುಳಿತುಕೊಳ್ಳುವ ಹಿಂಭಾಗದಲ್ಲಿ ರಾಜ ಲಾಂಛನ ಗಂಡಬೇರುಂಡ, ಚಿನ್ನದ ಛತ್ರಿ ಹಾಗೂ ಛತ್ರಿಯ ಮೇಲಿನ ಭಾಗದಲ್ಲಿ ನವಿಲಿನ ಆಕಾರ, ನವಿಲಿನ ಕಣ್ಣುಗಳಲ್ಲಿ ಅಪರೂಪದ ವಜ್ರದ ಹರಳುಗಳಿವೆ.ರಾಜವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಈ ಸಿಂಹಾಸನವನ್ನು ನಿನ್ನೆ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಗಿತ್ತು.

 

lokesh

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

10 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

57 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago