ಮೈಸೂರು

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ವೃತ್ತಗಳಿಗೆ ಇಲಿ, ಹೆಗ್ಗಣಗಳ ಕಾಟ

ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 200ಕ್ಕೂ ಹೆಚ್ಚು ವೃತ್ತಗಳಿದ್ದು, ನೂರಾರು ಪ್ರತಿಮೆಗಳಿವೆ. ಕುವೆಂಪುನಗರ, ರಾಮಕೃಷ್ಣನಗರ, ಬನ್ನಿಮಂಟಪ, ರಾಮಸ್ವಾಮಿ ಸರ್ಕಲ್‌, ವಿದ್ಯಾರಣ್ಯಪುರಂ, ಮೆಟ್ರೋಪೋಲ್‌ ಸರ್ಕಲ್‌, ಸರಸ್ವತಿಪುರಂ, ನಜರಬಾದ್‌ ಸಹಿತ ಎಲ್ಲಾ ಬಡಾವಣೆಗಳಲ್ಲಿ ಒಂದೊಂದು ವೃತ್ತಗಳಿವೆ.

ಡಾ.ಬಿ.ಆರ್.ಅಂಬೇಡ್ಕರ್‌, ಡಾ.ರಾಜ್‌ ಕುಮಾರ್‌, ಕುವೆಂಪು, ಪರಮಹಂಸ, ವಿವೇಕಾನಂದ, ಬಸವೇಶ್ವರ ಸೇರಿದಂತೆ ಸಾಕಷ್ಟು ಪ್ರತಿಮೆಗಳಿಗೆ. ವೃತ್ತಗಳ ಒಳಭಾಗದಲ್ಲಿ ಗಾರ್ಡನ್‌ಗಳಿದ್ದು, ಅವುಗಳನ್ನು ಕೂಡ ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ. ಮೊದಲೆಲ್ಲಾ ಇಲ್ಲಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಆದರೀಗ ವೃತ್ತಗಳ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ.

ವೃತ್ತಗಳ ನಿರ್ವಹಣೆಯನ್ನು ಸಂಘ, ಸಂಸ್ಥೆಗಳಿಗೆ ಕೊಟ್ಟರೆ ಸೂಕ್ತ ನಿರ್ವಹಣೆ ಜೊತೆಗೆ ಪ್ರತಿಮೆಗಳ ಸಂರಕ್ಷಣೆಯೂ ಆಗುತ್ತದೆ. ಮೈಸೂರು ನಗರ ಪಾಲಿಕೆ ಅದಕ್ಕೆ ಅವಕಾಶ ನೀಡಬೇಕಿದೆ. ಇವುಗಳ ಜೊತೆಗೆ ಅರಮನೆ ಗೋಪುರ, ಗೇಟುಗಳು, ಕಿಟಕಿಗಳಿಗೆ, ಆರ್ಚ್‌ಗಳಲ್ಲಿಯೂ ಪಾರಿವಾಳಗಳು ಕುಳಿತು ಹಿಕ್ಕೆ ಹಾಕುತ್ತಿವೆ. ಆದ್ದರಿಂದ ದಸರಾ ಸಮಯದಲ್ಲಿ ಮಾತ್ರ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯ ತಿಂಗಳಿಗೊಮ್ಮೆ ಮಾಡಲು ಆರಂಭಿಸಬೇಕು ಎಂದು ಪರಿಸರ ಪ್ರೇಮಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

2 hours ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

2 hours ago

ಕಾಡ ನೋಡಹೋಗಿ ಲಂಟಾನ ಕಂಡು ಬಂದೆ

ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…

2 hours ago

‘ಜನರ ಸೇವೆಗೆ ಎಟುಕದ ಅರಕೆರೆ ನಾಡಕಚೇರಿ’

ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…

2 hours ago

ಗಣಗೂರು ವ್ಯಾಪ್ತಿಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…

2 hours ago

ಮೈಸೂರು ಆಯ್ತು; ಈಗ ಜಿಲ್ಲೆಗೂ ಹಬ್ಬಿದ ಮಾದಕ ವಸ್ತುವಿನ ಘಾಟು

ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…

2 hours ago