ಮೈಸೂರು

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ವೃತ್ತಗಳಿಗೆ ಇಲಿ, ಹೆಗ್ಗಣಗಳ ಕಾಟ

ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 200ಕ್ಕೂ ಹೆಚ್ಚು ವೃತ್ತಗಳಿದ್ದು, ನೂರಾರು ಪ್ರತಿಮೆಗಳಿವೆ. ಕುವೆಂಪುನಗರ, ರಾಮಕೃಷ್ಣನಗರ, ಬನ್ನಿಮಂಟಪ, ರಾಮಸ್ವಾಮಿ ಸರ್ಕಲ್‌, ವಿದ್ಯಾರಣ್ಯಪುರಂ, ಮೆಟ್ರೋಪೋಲ್‌ ಸರ್ಕಲ್‌, ಸರಸ್ವತಿಪುರಂ, ನಜರಬಾದ್‌ ಸಹಿತ ಎಲ್ಲಾ ಬಡಾವಣೆಗಳಲ್ಲಿ ಒಂದೊಂದು ವೃತ್ತಗಳಿವೆ.

ಡಾ.ಬಿ.ಆರ್.ಅಂಬೇಡ್ಕರ್‌, ಡಾ.ರಾಜ್‌ ಕುಮಾರ್‌, ಕುವೆಂಪು, ಪರಮಹಂಸ, ವಿವೇಕಾನಂದ, ಬಸವೇಶ್ವರ ಸೇರಿದಂತೆ ಸಾಕಷ್ಟು ಪ್ರತಿಮೆಗಳಿಗೆ. ವೃತ್ತಗಳ ಒಳಭಾಗದಲ್ಲಿ ಗಾರ್ಡನ್‌ಗಳಿದ್ದು, ಅವುಗಳನ್ನು ಕೂಡ ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ. ಮೊದಲೆಲ್ಲಾ ಇಲ್ಲಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಆದರೀಗ ವೃತ್ತಗಳ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ.

ವೃತ್ತಗಳ ನಿರ್ವಹಣೆಯನ್ನು ಸಂಘ, ಸಂಸ್ಥೆಗಳಿಗೆ ಕೊಟ್ಟರೆ ಸೂಕ್ತ ನಿರ್ವಹಣೆ ಜೊತೆಗೆ ಪ್ರತಿಮೆಗಳ ಸಂರಕ್ಷಣೆಯೂ ಆಗುತ್ತದೆ. ಮೈಸೂರು ನಗರ ಪಾಲಿಕೆ ಅದಕ್ಕೆ ಅವಕಾಶ ನೀಡಬೇಕಿದೆ. ಇವುಗಳ ಜೊತೆಗೆ ಅರಮನೆ ಗೋಪುರ, ಗೇಟುಗಳು, ಕಿಟಕಿಗಳಿಗೆ, ಆರ್ಚ್‌ಗಳಲ್ಲಿಯೂ ಪಾರಿವಾಳಗಳು ಕುಳಿತು ಹಿಕ್ಕೆ ಹಾಕುತ್ತಿವೆ. ಆದ್ದರಿಂದ ದಸರಾ ಸಮಯದಲ್ಲಿ ಮಾತ್ರ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯ ತಿಂಗಳಿಗೊಮ್ಮೆ ಮಾಡಲು ಆರಂಭಿಸಬೇಕು ಎಂದು ಪರಿಸರ ಪ್ರೇಮಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

7 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

11 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

16 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

16 hours ago