ಮೈಸೂರು

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ವೃತ್ತಗಳಿಗೆ ಇಲಿ, ಹೆಗ್ಗಣಗಳ ಕಾಟ

ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 200ಕ್ಕೂ ಹೆಚ್ಚು ವೃತ್ತಗಳಿದ್ದು, ನೂರಾರು ಪ್ರತಿಮೆಗಳಿವೆ. ಕುವೆಂಪುನಗರ, ರಾಮಕೃಷ್ಣನಗರ, ಬನ್ನಿಮಂಟಪ, ರಾಮಸ್ವಾಮಿ ಸರ್ಕಲ್‌, ವಿದ್ಯಾರಣ್ಯಪುರಂ, ಮೆಟ್ರೋಪೋಲ್‌ ಸರ್ಕಲ್‌, ಸರಸ್ವತಿಪುರಂ, ನಜರಬಾದ್‌ ಸಹಿತ ಎಲ್ಲಾ ಬಡಾವಣೆಗಳಲ್ಲಿ ಒಂದೊಂದು ವೃತ್ತಗಳಿವೆ.

ಡಾ.ಬಿ.ಆರ್.ಅಂಬೇಡ್ಕರ್‌, ಡಾ.ರಾಜ್‌ ಕುಮಾರ್‌, ಕುವೆಂಪು, ಪರಮಹಂಸ, ವಿವೇಕಾನಂದ, ಬಸವೇಶ್ವರ ಸೇರಿದಂತೆ ಸಾಕಷ್ಟು ಪ್ರತಿಮೆಗಳಿಗೆ. ವೃತ್ತಗಳ ಒಳಭಾಗದಲ್ಲಿ ಗಾರ್ಡನ್‌ಗಳಿದ್ದು, ಅವುಗಳನ್ನು ಕೂಡ ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ. ಮೊದಲೆಲ್ಲಾ ಇಲ್ಲಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಆದರೀಗ ವೃತ್ತಗಳ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ.

ವೃತ್ತಗಳ ನಿರ್ವಹಣೆಯನ್ನು ಸಂಘ, ಸಂಸ್ಥೆಗಳಿಗೆ ಕೊಟ್ಟರೆ ಸೂಕ್ತ ನಿರ್ವಹಣೆ ಜೊತೆಗೆ ಪ್ರತಿಮೆಗಳ ಸಂರಕ್ಷಣೆಯೂ ಆಗುತ್ತದೆ. ಮೈಸೂರು ನಗರ ಪಾಲಿಕೆ ಅದಕ್ಕೆ ಅವಕಾಶ ನೀಡಬೇಕಿದೆ. ಇವುಗಳ ಜೊತೆಗೆ ಅರಮನೆ ಗೋಪುರ, ಗೇಟುಗಳು, ಕಿಟಕಿಗಳಿಗೆ, ಆರ್ಚ್‌ಗಳಲ್ಲಿಯೂ ಪಾರಿವಾಳಗಳು ಕುಳಿತು ಹಿಕ್ಕೆ ಹಾಕುತ್ತಿವೆ. ಆದ್ದರಿಂದ ದಸರಾ ಸಮಯದಲ್ಲಿ ಮಾತ್ರ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯ ತಿಂಗಳಿಗೊಮ್ಮೆ ಮಾಡಲು ಆರಂಭಿಸಬೇಕು ಎಂದು ಪರಿಸರ ಪ್ರೇಮಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

13 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

13 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

14 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

14 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago