ಮೈಸೂರು

ಮೈಸೂರು: ದಸರಾ ಆಚರಣೆ ವಿರೋಧಿಸಿ ಹೆದ್ದಾರಿ ತಡೆಗೆ ಮುಂದಾದ ರೈತರು-ಪೊಲೀಸ್‌ ವಶಕ್ಕೆ

ಮೈಸೂರು : ದಸರಾ ಆಚರಣೆ ವಿರೋಧಿಸಿ ಕರಾಳ ದಸರಾ ಆಚರಿಸಿ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮಂಗಳವಾರ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಲಂಬಿಯ ಏಷಿಯಾ ಆಸ್ಪತ್ರೆ ಮುಂಭಾಗ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಮುನ್ನೆಚ್ವರಿಕೆ ಕ್ರಮವಾಗಿ ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ಯಲಾಯಿತು.

ಇದೇ ವೇಳೆ ಕುರುಬೂರು ಶಾಂತಕುಮಾರ್ ಮಾತನಾಡಿ, ʼರಾಜ್ಯದಲ್ಲಿ ಬರ ಆವತಿಸಿದ್ದರೂ ಸರ್ಕಾರದ ಮಂತ್ರಿಗಳು ದಸರಾ ಆಚರಣೆ ಮೂಲಕ ಮೋಜು ಮಸ್ತಿಗರ ಇಳಿದಿದ್ದಾರೆ.‌ದಸರಾ ಎಂದರೆ ಸಂತೃಪ್ತಿ, ಸಂಭ್ರಮದಿಂದ ಕೂಡಿರಬೇಕು, ಆದರೆ ರೈತರು ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರ ಅದ್ದೂರಿ ದಸರಾ ಆಚರಣೆಗೆ ಮುಂದಾಗಿರಿವುದು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼರೈತರನ್ನು ಜೈಲಿನಲ್ಲಿಟ್ಟು ರಾಜ್ಯ ಸರಕಾರ ದಸರಾ ಆಚರಣೆ ಮಾಡುತ್ತಿದೆ.‌ಇದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ.‌ ಸೂತಕದ ನಡುವೆ ದಸರಾ ಆಚರಣೆ ಮಾಡುತ್ತಿದ್ದಾರೆʼ ಎಂದು ಕಿಡಿಕಾರಿದರು.

ರಾಜ್ಯದಲ್ಲಿ 200 ಕ್ಕೂ ಹೆಚ್ಚು ತಾಲೂಕುಗಳು ಬತಪೀಡಿತದಿಂದ ಕೂಡಿವೆ. ಅವರಿಗೆ ಪರಿಹಾರ ಕೊಡುವಲ್ಲಿ ಸರ್ಕಾರ ಗಮನ ಹರಿಸುತ್ತಿಲ್ಲ. ಈಗಾಗಲೇ 300 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ದಸರಾ ಆಚರಣೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿ ಬಂದ್ ಮಾಡುವುದಾಗಿ ನಾಲ್ಕು ದಿನಗಳ ಹಿಂದೆಯೇ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ.‌ಮೈಸೂರಿನಲ್ಲಿ ರಾಜ್ಯದ ಸರ್ಕಾರದ ಅರ್ಧ ಸಚಿವರು ಮೈಸೂರಿನಲ್ಲಿಯೇ ಇದ್ದಾರೆ.‌ಸೌಜನ್ಯಕ್ಕಾದರೂ ರೈತರ ಬಳಿ ಬಂದು ಮಾತನಾಡದೆ ನಿರ್ಲಕ್ಷ್ಯ ವಹಿಸಿರುವುದು ರೈತರ ಮೇಲೆ ಈ ಸರ್ಕಾರಕ್ಕೆ ಇರುವ ಕಾಳಜಿ ಗೊತ್ತಾಗುತ್ತದೆ ಎಂದು ನುಡಿದರು.

ಪ್ರತಿಭಟನೆಯಲ್ಲಿ ಅತ್ತಹಳ್ಳಿ ದೇವರಾಜು, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಸೇರಿದಂತೆ ಹಲವರು ಭಾಗವಹಿಸಿದ್ದರು.

andolanait

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

15 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

32 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

45 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago