ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಬೆಳಿಗ್ಗೆ ೧೦ ಗಂಟೆಯಿಂದ ರಾತ್ರಿ ೯ರವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಈ ಬಾರಿ ಸುಮಾರು ೨೫,೦೦೦ ವಿಭಿನ್ನ ಅಲಂಕಾರಿಕ ಹೂ ಕುಂಡಗಳು, (ಮಾರಿಗೋಲ್ಡ್, ಸಾಲ್ವಿಯ, ಡೇಲಿಯ, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸಿಲೋಷಿಯ, ವರ್ಬಿನ, ಡೈಂಥಸ್, ಫ್ರೈಚ್ ಮಾರಿಗೋಲ್ಡ್,ಜಿನಿಯಾ ಪೆಲಂಬೂಡಿಯ, ಸನ್-ವರ್, ಜಪಾನ್ ಸನ್ಫ್ಲವರ್, ಆಲೇಕ್, ಸಿನೇರಿಯಾ, ಕಾಸ್ಮಸ್, ಪ್ಲಾಕ್ಸ್, ಕ್ಯಾಲೂಂಡಲ, ಗೋಪೆರಿಯನ್, ಮ್ಯಾಂಡೂವಿಲ, ಪಾಂಚಿಟಿಯ, ತುರೂನಿಯಂ, ಬಾಲ್ಸಂ, ಕಾಕ್ಸಕೊಂಬ್, ನಸ್ಟರ್ಸಿಯಂ, ಆಂಟಿರೈನಂ, ಬೋನ್ಸಾಯ್ ಗಿಡಗಳು, ಸೇರಿದಂತೆ ೩೫ ಜಾತಿಯ ಹೂವಿನ ಗಿಡಗಳು ಹಾಗೂ ಅಂದಾಜು ೪ ಲಕ್ಷ ವಿಧದ ಅಲಂಕಾರಿಕ ಹೂವುಗಳಿಂದ ಹಾಗೂ ಊಟಿ ಕಟ್ ಫ್ಲವರ್ಗಳಿಂದ ಅಲಂಕರಿಸಲಾಗಿರುತ್ತದೆ. ಶೃಂಗೇರಿ ದೇವಸ್ಥಾನದ ಮಾದರಿಯನ್ನು ಹೂವಿನಿಂದ ರೂಪಿಸುವುದು ವಿಶೇಷವಾಗಿದೆ.
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…