ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಬೆಳಿಗ್ಗೆ ೧೦ ಗಂಟೆಯಿಂದ ರಾತ್ರಿ ೯ರವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಈ ಬಾರಿ ಸುಮಾರು ೨೫,೦೦೦ ವಿಭಿನ್ನ ಅಲಂಕಾರಿಕ ಹೂ ಕುಂಡಗಳು, (ಮಾರಿಗೋಲ್ಡ್, ಸಾಲ್ವಿಯ, ಡೇಲಿಯ, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸಿಲೋಷಿಯ, ವರ್ಬಿನ, ಡೈಂಥಸ್, ಫ್ರೈಚ್ ಮಾರಿಗೋಲ್ಡ್,ಜಿನಿಯಾ ಪೆಲಂಬೂಡಿಯ, ಸನ್-ವರ್, ಜಪಾನ್ ಸನ್ಫ್ಲವರ್, ಆಲೇಕ್, ಸಿನೇರಿಯಾ, ಕಾಸ್ಮಸ್, ಪ್ಲಾಕ್ಸ್, ಕ್ಯಾಲೂಂಡಲ, ಗೋಪೆರಿಯನ್, ಮ್ಯಾಂಡೂವಿಲ, ಪಾಂಚಿಟಿಯ, ತುರೂನಿಯಂ, ಬಾಲ್ಸಂ, ಕಾಕ್ಸಕೊಂಬ್, ನಸ್ಟರ್ಸಿಯಂ, ಆಂಟಿರೈನಂ, ಬೋನ್ಸಾಯ್ ಗಿಡಗಳು, ಸೇರಿದಂತೆ ೩೫ ಜಾತಿಯ ಹೂವಿನ ಗಿಡಗಳು ಹಾಗೂ ಅಂದಾಜು ೪ ಲಕ್ಷ ವಿಧದ ಅಲಂಕಾರಿಕ ಹೂವುಗಳಿಂದ ಹಾಗೂ ಊಟಿ ಕಟ್ ಫ್ಲವರ್ಗಳಿಂದ ಅಲಂಕರಿಸಲಾಗಿರುತ್ತದೆ. ಶೃಂಗೇರಿ ದೇವಸ್ಥಾನದ ಮಾದರಿಯನ್ನು ಹೂವಿನಿಂದ ರೂಪಿಸುವುದು ವಿಶೇಷವಾಗಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…