ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಬೆಳಿಗ್ಗೆ ೧೦ ಗಂಟೆಯಿಂದ ರಾತ್ರಿ ೯ರವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಈ ಬಾರಿ ಸುಮಾರು ೨೫,೦೦೦ ವಿಭಿನ್ನ ಅಲಂಕಾರಿಕ ಹೂ ಕುಂಡಗಳು, (ಮಾರಿಗೋಲ್ಡ್, ಸಾಲ್ವಿಯ, ಡೇಲಿಯ, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸಿಲೋಷಿಯ, ವರ್ಬಿನ, ಡೈಂಥಸ್, ಫ್ರೈಚ್ ಮಾರಿಗೋಲ್ಡ್,ಜಿನಿಯಾ ಪೆಲಂಬೂಡಿಯ, ಸನ್-ವರ್, ಜಪಾನ್ ಸನ್ಫ್ಲವರ್, ಆಲೇಕ್, ಸಿನೇರಿಯಾ, ಕಾಸ್ಮಸ್, ಪ್ಲಾಕ್ಸ್, ಕ್ಯಾಲೂಂಡಲ, ಗೋಪೆರಿಯನ್, ಮ್ಯಾಂಡೂವಿಲ, ಪಾಂಚಿಟಿಯ, ತುರೂನಿಯಂ, ಬಾಲ್ಸಂ, ಕಾಕ್ಸಕೊಂಬ್, ನಸ್ಟರ್ಸಿಯಂ, ಆಂಟಿರೈನಂ, ಬೋನ್ಸಾಯ್ ಗಿಡಗಳು, ಸೇರಿದಂತೆ ೩೫ ಜಾತಿಯ ಹೂವಿನ ಗಿಡಗಳು ಹಾಗೂ ಅಂದಾಜು ೪ ಲಕ್ಷ ವಿಧದ ಅಲಂಕಾರಿಕ ಹೂವುಗಳಿಂದ ಹಾಗೂ ಊಟಿ ಕಟ್ ಫ್ಲವರ್ಗಳಿಂದ ಅಲಂಕರಿಸಲಾಗಿರುತ್ತದೆ. ಶೃಂಗೇರಿ ದೇವಸ್ಥಾನದ ಮಾದರಿಯನ್ನು ಹೂವಿನಿಂದ ರೂಪಿಸುವುದು ವಿಶೇಷವಾಗಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…