ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಬೆಳಿಗ್ಗೆ ೧೦ ಗಂಟೆಯಿಂದ ರಾತ್ರಿ ೯ರವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಈ ಬಾರಿ ಸುಮಾರು ೨೫,೦೦೦ ವಿಭಿನ್ನ ಅಲಂಕಾರಿಕ ಹೂ ಕುಂಡಗಳು, (ಮಾರಿಗೋಲ್ಡ್, ಸಾಲ್ವಿಯ, ಡೇಲಿಯ, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸಿಲೋಷಿಯ, ವರ್ಬಿನ, ಡೈಂಥಸ್, ಫ್ರೈಚ್ ಮಾರಿಗೋಲ್ಡ್,ಜಿನಿಯಾ ಪೆಲಂಬೂಡಿಯ, ಸನ್-ವರ್, ಜಪಾನ್ ಸನ್ಫ್ಲವರ್, ಆಲೇಕ್, ಸಿನೇರಿಯಾ, ಕಾಸ್ಮಸ್, ಪ್ಲಾಕ್ಸ್, ಕ್ಯಾಲೂಂಡಲ, ಗೋಪೆರಿಯನ್, ಮ್ಯಾಂಡೂವಿಲ, ಪಾಂಚಿಟಿಯ, ತುರೂನಿಯಂ, ಬಾಲ್ಸಂ, ಕಾಕ್ಸಕೊಂಬ್, ನಸ್ಟರ್ಸಿಯಂ, ಆಂಟಿರೈನಂ, ಬೋನ್ಸಾಯ್ ಗಿಡಗಳು, ಸೇರಿದಂತೆ ೩೫ ಜಾತಿಯ ಹೂವಿನ ಗಿಡಗಳು ಹಾಗೂ ಅಂದಾಜು ೪ ಲಕ್ಷ ವಿಧದ ಅಲಂಕಾರಿಕ ಹೂವುಗಳಿಂದ ಹಾಗೂ ಊಟಿ ಕಟ್ ಫ್ಲವರ್ಗಳಿಂದ ಅಲಂಕರಿಸಲಾಗಿರುತ್ತದೆ. ಶೃಂಗೇರಿ ದೇವಸ್ಥಾನದ ಮಾದರಿಯನ್ನು ಹೂವಿನಿಂದ ರೂಪಿಸುವುದು ವಿಶೇಷವಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…