ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.
ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ ಗ್ರೂಪ್ಗೆ ಸೇರಿದ್ದಾರೆ. ನಂತರ ವಾಟ್ಸಾಪ್ ಗ್ರೂಪ್ಗೆ ಸೇರುವಂತೆ ಅವರಿಗೆ ಅನ್ಯರು ಸಂದೇಶ ಕಳಿಸಿದ್ದಾರೆ.
ಅವರ ಮಾತನ್ನು ನಂಬಿದ ಅವರು ವಾಟ್ಸಾಪ್ ಗ್ರೂಪ್ಗೆ ಸೇರಿದ್ದಾರೆ. ಷೇರು ಮಾರುಕಟ್ಟೆ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಲಕ್ಷಾಂತರ ರೂ. ಗಳಿಸಬಹುದು ಎಂದು ಖದೀಮರು ಆಸೆ ಹುಟ್ಟಿಸಿದ್ದಾರೆ. ಅವರ ಮಾತನ್ನು ನಂಬಿದ ಅವರು ಹಂತ ಹಂತವಾಗಿ 22.15 ಲಕ್ಷ ರೂ. ಹಣವನ್ನು ಅವರು ಹೇಳಿದ ಖಾತೆಗೆ ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…