ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.
ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ ಗ್ರೂಪ್ಗೆ ಸೇರಿದ್ದಾರೆ. ನಂತರ ವಾಟ್ಸಾಪ್ ಗ್ರೂಪ್ಗೆ ಸೇರುವಂತೆ ಅವರಿಗೆ ಅನ್ಯರು ಸಂದೇಶ ಕಳಿಸಿದ್ದಾರೆ.
ಅವರ ಮಾತನ್ನು ನಂಬಿದ ಅವರು ವಾಟ್ಸಾಪ್ ಗ್ರೂಪ್ಗೆ ಸೇರಿದ್ದಾರೆ. ಷೇರು ಮಾರುಕಟ್ಟೆ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಲಕ್ಷಾಂತರ ರೂ. ಗಳಿಸಬಹುದು ಎಂದು ಖದೀಮರು ಆಸೆ ಹುಟ್ಟಿಸಿದ್ದಾರೆ. ಅವರ ಮಾತನ್ನು ನಂಬಿದ ಅವರು ಹಂತ ಹಂತವಾಗಿ 22.15 ಲಕ್ಷ ರೂ. ಹಣವನ್ನು ಅವರು ಹೇಳಿದ ಖಾತೆಗೆ ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…