ಮೈಸೂರು : ಕೋಮುವಾದದ ವಿರುದ್ಧ ಕರ್ನಾಟಕ ಸ್ಟೇಟ್ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್ಎಸ್ಎಫ್) ಆಯೋಜಿಸಿರುವ 12 ದಿನಗಳ ಸೌಹರ್ದ ನಡಿಗೆಗೆ ಗಾಂಧಿನಗರದ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.
ಮೈಸೂರಿನ ಫೌಂಟೇನ್ ವೃತ್ತದಿಂದ ಸೆಂಟ್ ಫಿಲೋಮಿನಾ ಚರ್ಚ್ ವೃತ್ತದವರೆಗೆ ಸೌಹಾರ್ದ ನಡಿಗೆ ಜರುಗಿತು.
ಬಳಿಕ ಮಾತನಾಡಿದ ಜ್ಞಾನಪ್ರಕಾಶ್ ಸ್ವಾಮೀಜಿ, ಧರ್ಮಕ್ಕಿಂತ ನಮಗೆ ದೇಶ ದೊಡ್ಡದೇ ಹೊರತು ಧರ್ಮ ದೊಡ್ಡದಲ್ಲ. ಧರ್ಮದಲ್ಲಿ ಹೆಸರಿಯಲ್ಲಿ ಭಯೋತ್ಪಾದನೆ ಮಾಡುವ ಯಾವುದೇ ಕೃತ್ಯಗಳು ನಡೆದರೂ ಅದನ್ನು ಖಂಡಿಸುತ್ತೇವೆ ಎಂದರು.
ದೇಶದಲ್ಲಿ ನಡೆಯುತ್ತಿರುವ ಕೋಮುವಾದ, ಹಿಂಸಾಚಾರ ಯಾವುದೇ ಧರ್ಮದಲ್ಲಿಯೂ ಇಲ್ಲ. ಧರ್ಮ ಮತ್ತು ಜಾತಿ ವಿಚಾರದಲ್ಲಿ ಬೆಂಕಿ ಹಚ್ಚುವುದು, ರಾಜಕಾರಣ ಮಾಡುವುದು ಅಕ್ಷಮ್ಯ ಅಪರಾಧವಾಗಿದೆ. ಹೆಣ ಮತ್ತು ಹಣದ ನಡುವೆ ರಾಜಕಾರಣ ಮಾಡುವಂತಹದ್ದು ಕೂಡ ಅಪರಾಧವಾಗಿದೆ ಎಂದರು.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನವನ್ನು ಒಪ್ಪಿಕೊಂಡ ಮೇಲೆ ಧರ್ಮ ನಮ್ಮ ನಮ್ಮ ವೈಯಕ್ತಿವಾಗಿರಬೇಕು. ದೇಶ ದೊಡ್ಡದಾಗಿರಬೇಕು. ದೇಶದ ಅಖಂಡತೆ ಮತ್ತು ಭ್ರಾತೃತ್ವವೇ ನಮಗೆ ಬಹಳ ಮುಖ್ಯವಾಗಿದುದು. ಹಾಗಾಗಿ ಧರ್ಮಗಳು ನಮ್ಮ ವೈಯಕ್ತಿವಾಗಿರಲಿ. ದೇಶ ವಿಷಯ ಬಂದಾಗ ದೇಶದ ಪರವಾಗಿ ಏಕತೆಯಿಂದ ನಿಲ್ಲಬೇಕು ಎಂಬುದನ್ನು ದೇಶದ ಸಂವಿಧಾನ ನಮಗೆ ಬೋದಿಸಿದೆ ಎಂದು ತಿಳಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…