ಮೈಸೂರು

ಮೈಸೂರು : ಕೋಮುವಾದದ ವಿರುದ್ಧ ಸೌಹರ್ದ ನಡಿಗೆ

ಮೈಸೂರು : ಕೋಮುವಾದದ ವಿರುದ್ಧ  ಕರ್ನಾಟಕ ಸ್ಟೇಟ್ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್)  ಆಯೋಜಿಸಿರುವ  12 ದಿನಗಳ ಸೌಹರ್ದ ನಡಿಗೆಗೆ  ಗಾಂಧಿನಗರದ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.

ಮೈಸೂರಿನ ಫೌಂಟೇನ್ ವೃತ್ತದಿಂದ ಸೆಂಟ್ ಫಿಲೋಮಿನಾ ಚರ್ಚ್ ವೃತ್ತದವರೆಗೆ  ಸೌಹಾರ್ದ ನಡಿಗೆ ಜರುಗಿತು.

ಬಳಿಕ ಮಾತನಾಡಿದ  ಜ್ಞಾನಪ್ರಕಾಶ್ ಸ್ವಾಮೀಜಿ, ಧರ್ಮಕ್ಕಿಂತ ನಮಗೆ ದೇಶ ದೊಡ್ಡದೇ ಹೊರತು ಧರ್ಮ ದೊಡ್ಡದಲ್ಲ. ಧರ್ಮದಲ್ಲಿ ಹೆಸರಿಯಲ್ಲಿ  ಭಯೋತ್ಪಾದನೆ ಮಾಡುವ ಯಾವುದೇ ಕೃತ್ಯಗಳು ನಡೆದರೂ ಅದನ್ನು ಖಂಡಿಸುತ್ತೇವೆ ಎಂದರು.

ದೇಶದಲ್ಲಿ ನಡೆಯುತ್ತಿರುವ ಕೋಮುವಾದ, ಹಿಂಸಾಚಾರ ಯಾವುದೇ ಧರ್ಮದಲ್ಲಿಯೂ ಇಲ್ಲ. ಧರ್ಮ ಮತ್ತು ಜಾತಿ ವಿಚಾರದಲ್ಲಿ ಬೆಂಕಿ ಹಚ್ಚುವುದು, ರಾಜಕಾರಣ ಮಾಡುವುದು ಅಕ್ಷಮ್ಯ ಅಪರಾಧವಾಗಿದೆ. ಹೆಣ ಮತ್ತು ಹಣದ ನಡುವೆ ರಾಜಕಾರಣ ಮಾಡುವಂತಹದ್ದು ಕೂಡ ಅಪರಾಧವಾಗಿದೆ ಎಂದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನವನ್ನು ಒಪ್ಪಿಕೊಂಡ ಮೇಲೆ ಧರ್ಮ ನಮ್ಮ ನಮ್ಮ ವೈಯಕ್ತಿವಾಗಿರಬೇಕು. ದೇಶ ದೊಡ್ಡದಾಗಿರಬೇಕು. ದೇಶದ ಅಖಂಡತೆ ಮತ್ತು ಭ್ರಾತೃತ್ವವೇ ನಮಗೆ ಬಹಳ ಮುಖ್ಯವಾಗಿದುದು. ಹಾಗಾಗಿ ಧರ್ಮಗಳು ನಮ್ಮ ವೈಯಕ್ತಿವಾಗಿರಲಿ. ದೇಶ ವಿಷಯ ಬಂದಾಗ ದೇಶದ ಪರವಾಗಿ ಏಕತೆಯಿಂದ ನಿಲ್ಲಬೇಕು ಎಂಬುದನ್ನು ದೇಶದ ಸಂವಿಧಾನ ನಮಗೆ ಬೋದಿಸಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

4 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

4 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

4 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

4 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

5 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

5 hours ago