ಮೈಸೂರು

ಮೈಸೂರು : ಕೋಮುವಾದದ ವಿರುದ್ಧ ಸೌಹರ್ದ ನಡಿಗೆ

ಮೈಸೂರು : ಕೋಮುವಾದದ ವಿರುದ್ಧ  ಕರ್ನಾಟಕ ಸ್ಟೇಟ್ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್)  ಆಯೋಜಿಸಿರುವ  12 ದಿನಗಳ ಸೌಹರ್ದ ನಡಿಗೆಗೆ  ಗಾಂಧಿನಗರದ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.

ಮೈಸೂರಿನ ಫೌಂಟೇನ್ ವೃತ್ತದಿಂದ ಸೆಂಟ್ ಫಿಲೋಮಿನಾ ಚರ್ಚ್ ವೃತ್ತದವರೆಗೆ  ಸೌಹಾರ್ದ ನಡಿಗೆ ಜರುಗಿತು.

ಬಳಿಕ ಮಾತನಾಡಿದ  ಜ್ಞಾನಪ್ರಕಾಶ್ ಸ್ವಾಮೀಜಿ, ಧರ್ಮಕ್ಕಿಂತ ನಮಗೆ ದೇಶ ದೊಡ್ಡದೇ ಹೊರತು ಧರ್ಮ ದೊಡ್ಡದಲ್ಲ. ಧರ್ಮದಲ್ಲಿ ಹೆಸರಿಯಲ್ಲಿ  ಭಯೋತ್ಪಾದನೆ ಮಾಡುವ ಯಾವುದೇ ಕೃತ್ಯಗಳು ನಡೆದರೂ ಅದನ್ನು ಖಂಡಿಸುತ್ತೇವೆ ಎಂದರು.

ದೇಶದಲ್ಲಿ ನಡೆಯುತ್ತಿರುವ ಕೋಮುವಾದ, ಹಿಂಸಾಚಾರ ಯಾವುದೇ ಧರ್ಮದಲ್ಲಿಯೂ ಇಲ್ಲ. ಧರ್ಮ ಮತ್ತು ಜಾತಿ ವಿಚಾರದಲ್ಲಿ ಬೆಂಕಿ ಹಚ್ಚುವುದು, ರಾಜಕಾರಣ ಮಾಡುವುದು ಅಕ್ಷಮ್ಯ ಅಪರಾಧವಾಗಿದೆ. ಹೆಣ ಮತ್ತು ಹಣದ ನಡುವೆ ರಾಜಕಾರಣ ಮಾಡುವಂತಹದ್ದು ಕೂಡ ಅಪರಾಧವಾಗಿದೆ ಎಂದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನವನ್ನು ಒಪ್ಪಿಕೊಂಡ ಮೇಲೆ ಧರ್ಮ ನಮ್ಮ ನಮ್ಮ ವೈಯಕ್ತಿವಾಗಿರಬೇಕು. ದೇಶ ದೊಡ್ಡದಾಗಿರಬೇಕು. ದೇಶದ ಅಖಂಡತೆ ಮತ್ತು ಭ್ರಾತೃತ್ವವೇ ನಮಗೆ ಬಹಳ ಮುಖ್ಯವಾಗಿದುದು. ಹಾಗಾಗಿ ಧರ್ಮಗಳು ನಮ್ಮ ವೈಯಕ್ತಿವಾಗಿರಲಿ. ದೇಶ ವಿಷಯ ಬಂದಾಗ ದೇಶದ ಪರವಾಗಿ ಏಕತೆಯಿಂದ ನಿಲ್ಲಬೇಕು ಎಂಬುದನ್ನು ದೇಶದ ಸಂವಿಧಾನ ನಮಗೆ ಬೋದಿಸಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

2 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

2 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

2 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

2 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

2 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

2 hours ago