ಮೈಸೂರು

ಮೈಸೂರು : ಕೋಮುವಾದದ ವಿರುದ್ಧ ಸೌಹರ್ದ ನಡಿಗೆ

ಮೈಸೂರು : ಕೋಮುವಾದದ ವಿರುದ್ಧ  ಕರ್ನಾಟಕ ಸ್ಟೇಟ್ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್)  ಆಯೋಜಿಸಿರುವ  12 ದಿನಗಳ ಸೌಹರ್ದ ನಡಿಗೆಗೆ  ಗಾಂಧಿನಗರದ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.

ಮೈಸೂರಿನ ಫೌಂಟೇನ್ ವೃತ್ತದಿಂದ ಸೆಂಟ್ ಫಿಲೋಮಿನಾ ಚರ್ಚ್ ವೃತ್ತದವರೆಗೆ  ಸೌಹಾರ್ದ ನಡಿಗೆ ಜರುಗಿತು.

ಬಳಿಕ ಮಾತನಾಡಿದ  ಜ್ಞಾನಪ್ರಕಾಶ್ ಸ್ವಾಮೀಜಿ, ಧರ್ಮಕ್ಕಿಂತ ನಮಗೆ ದೇಶ ದೊಡ್ಡದೇ ಹೊರತು ಧರ್ಮ ದೊಡ್ಡದಲ್ಲ. ಧರ್ಮದಲ್ಲಿ ಹೆಸರಿಯಲ್ಲಿ  ಭಯೋತ್ಪಾದನೆ ಮಾಡುವ ಯಾವುದೇ ಕೃತ್ಯಗಳು ನಡೆದರೂ ಅದನ್ನು ಖಂಡಿಸುತ್ತೇವೆ ಎಂದರು.

ದೇಶದಲ್ಲಿ ನಡೆಯುತ್ತಿರುವ ಕೋಮುವಾದ, ಹಿಂಸಾಚಾರ ಯಾವುದೇ ಧರ್ಮದಲ್ಲಿಯೂ ಇಲ್ಲ. ಧರ್ಮ ಮತ್ತು ಜಾತಿ ವಿಚಾರದಲ್ಲಿ ಬೆಂಕಿ ಹಚ್ಚುವುದು, ರಾಜಕಾರಣ ಮಾಡುವುದು ಅಕ್ಷಮ್ಯ ಅಪರಾಧವಾಗಿದೆ. ಹೆಣ ಮತ್ತು ಹಣದ ನಡುವೆ ರಾಜಕಾರಣ ಮಾಡುವಂತಹದ್ದು ಕೂಡ ಅಪರಾಧವಾಗಿದೆ ಎಂದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನವನ್ನು ಒಪ್ಪಿಕೊಂಡ ಮೇಲೆ ಧರ್ಮ ನಮ್ಮ ನಮ್ಮ ವೈಯಕ್ತಿವಾಗಿರಬೇಕು. ದೇಶ ದೊಡ್ಡದಾಗಿರಬೇಕು. ದೇಶದ ಅಖಂಡತೆ ಮತ್ತು ಭ್ರಾತೃತ್ವವೇ ನಮಗೆ ಬಹಳ ಮುಖ್ಯವಾಗಿದುದು. ಹಾಗಾಗಿ ಧರ್ಮಗಳು ನಮ್ಮ ವೈಯಕ್ತಿವಾಗಿರಲಿ. ದೇಶ ವಿಷಯ ಬಂದಾಗ ದೇಶದ ಪರವಾಗಿ ಏಕತೆಯಿಂದ ನಿಲ್ಲಬೇಕು ಎಂಬುದನ್ನು ದೇಶದ ಸಂವಿಧಾನ ನಮಗೆ ಬೋದಿಸಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago