ಮೈಸೂರು

ಮೈಸೂರು ದಸರೆಗೆ ಮುನ್ನುಡಿ ಬರೆದ ಗಜಪಯಣ

ನಾಗರಹೊಳೆ: ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಚಾಲನೆ ನೀಡಿದರು.

ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಆನೆಗಳಿಗೆ ಫಲತಾಂಬೂಲ ನೀಡುತ್ತಿರುವುದು

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು.

ಕಲಾತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆಹಾಕಿದವು.

ಮಂಗಳವಾದ್ಯಗಳ ಜೊತೆ ಹೆಜ್ಜೆ ಹಾಕಿದ ಆನೆಗಳು

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರಾದ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಹಲವು ಗಣ್ಯರ ಉಪಸ್ಥಿತಿ

ಶಾಸಕರಾದ ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ವಿಶ್ವನಾಥ್, ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಎಸ್.ಪಿ.ಚೇತನ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು. ಆ.10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ.

andolanait

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

26 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

52 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago