ಮೈಸೂರು

ಮೈಸೂರು ದಸರೆಗೆ ಮುನ್ನುಡಿ ಬರೆದ ಗಜಪಯಣ

ನಾಗರಹೊಳೆ: ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಚಾಲನೆ ನೀಡಿದರು.

ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಆನೆಗಳಿಗೆ ಫಲತಾಂಬೂಲ ನೀಡುತ್ತಿರುವುದು

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು.

ಕಲಾತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆಹಾಕಿದವು.

ಮಂಗಳವಾದ್ಯಗಳ ಜೊತೆ ಹೆಜ್ಜೆ ಹಾಕಿದ ಆನೆಗಳು

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರಾದ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಹಲವು ಗಣ್ಯರ ಉಪಸ್ಥಿತಿ

ಶಾಸಕರಾದ ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ವಿಶ್ವನಾಥ್, ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಎಸ್.ಪಿ.ಚೇತನ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು. ಆ.10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago