ಮೈಸೂರು

ಮೈಸೂರು ದಸರೆಗೆ ಮುನ್ನುಡಿ ಬರೆದ ಗಜಪಯಣ

ನಾಗರಹೊಳೆ: ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಚಾಲನೆ ನೀಡಿದರು.

ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಆನೆಗಳಿಗೆ ಫಲತಾಂಬೂಲ ನೀಡುತ್ತಿರುವುದು

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು.

ಕಲಾತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆಹಾಕಿದವು.

ಮಂಗಳವಾದ್ಯಗಳ ಜೊತೆ ಹೆಜ್ಜೆ ಹಾಕಿದ ಆನೆಗಳು

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರಾದ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಹಲವು ಗಣ್ಯರ ಉಪಸ್ಥಿತಿ

ಶಾಸಕರಾದ ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ವಿಶ್ವನಾಥ್, ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಎಸ್.ಪಿ.ಚೇತನ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು. ಆ.10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago