ಮೈಸೂರು: ಪ್ರತ್ಯೇಕ ಮೂರು ಸ್ಥಳಗಳಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ದಕ್ಷಿಣ ಗ್ರಾಮಾಂತರ ಹಾಗೂ ಇಲವಾಲ ಪೊಲಿಸರು ಒಟ್ಟು 34 ಮಂದಿಯನ್ನು ಬಂಧಿಸಿ 1.55 ಲಕ್ಷ ರೂ. ನಗದು ಹಾಗೂ 6 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಮೊದಲ ಪ್ರಕರಣದಲ್ಲಿ ಕೊಪ್ಪಲೂರು ಗ್ರಾಮದ ಸಿದ್ದಲಿಂಗೇಶ್ವರ ಬಡಾವಣೆ ಬಳಿಯ ಖಾಲಿ ನಿವೇಶನದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ವರುಣ ಠಾಣಾ ಪೊಲಿಸರಿಗೆ ಬಂದಿದೆ. ಕೂಡಲೇ ಪೊಲೀಸರ ತಂಡ ಸ್ಥಳಕ್ಕೆ ತೆರಳಿ ದಾಳಿ ನಡಸಿದ ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 14 ಮಂದಿಯನ್ನು ಬಂಧಿಸಿದ ಪೊಲೀಸರು, ಪಣಕ್ಕಿಟ್ಟಿದ್ದ 17,130 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಎರಡನೇ ಪ್ರಕರಣದಲ್ಲಿ ಗೆಜ್ಜಗಳ್ಳಿಯ ನಂಜಪ್ಪ ಎಂಬವರ ಮನೆಯ ಮುಂಭಾಗ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ಜೂಜಾಟದಲ್ಲಿ ಭಾಗಿಯಾಗಿದ್ದ 13 ಮಂದಿಯನ್ನು ಪೊಲೀಸರು ಬಂಽಸಿದ್ದು, 87,050 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ದಾಖಲಾಗಿವೆ.
ಮೂರನೇ ಪ್ರಕರಣದಲ್ಲಿ ಇಲವಾಲ ಬಳಿಯ ಕೆಆರ್ಎಸ್ ಬೈ ಪಾಸ್ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಇಲವಾಲ ಪೊಲೀಸರಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದಲ್ಲಿ ತೊಡಗದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪಣಕ್ಕಿಟ್ಟದ್ದ 51,140 ರೂ. ನಗದು ಹಾಗೂ 6 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂದ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…