ಮೈಸೂರು

ಮೈಸೂರು | ಜೂಜು ಅಡ್ಡೆ ಮೇಲೆ ದಾಳಿ ; 34 ಮಂದಿ ಬಂಧನ

ಮೈಸೂರು: ಪ್ರತ್ಯೇಕ ಮೂರು ಸ್ಥಳಗಳಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ದಕ್ಷಿಣ ಗ್ರಾಮಾಂತರ ಹಾಗೂ ಇಲವಾಲ ಪೊಲಿಸರು ಒಟ್ಟು 34 ಮಂದಿಯನ್ನು ಬಂಧಿಸಿ 1.55 ಲಕ್ಷ ರೂ. ನಗದು ಹಾಗೂ 6 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೊದಲ ಪ್ರಕರಣದಲ್ಲಿ ಕೊಪ್ಪಲೂರು ಗ್ರಾಮದ ಸಿದ್ದಲಿಂಗೇಶ್ವರ ಬಡಾವಣೆ ಬಳಿಯ ಖಾಲಿ ನಿವೇಶನದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ವರುಣ ಠಾಣಾ ಪೊಲಿಸರಿಗೆ ಬಂದಿದೆ. ಕೂಡಲೇ ಪೊಲೀಸರ ತಂಡ ಸ್ಥಳಕ್ಕೆ ತೆರಳಿ ದಾಳಿ ನಡಸಿದ ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 14 ಮಂದಿಯನ್ನು ಬಂಧಿಸಿದ ಪೊಲೀಸರು, ಪಣಕ್ಕಿಟ್ಟಿದ್ದ 17,130 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಎರಡನೇ ಪ್ರಕರಣದಲ್ಲಿ ಗೆಜ್ಜಗಳ್ಳಿಯ ನಂಜಪ್ಪ ಎಂಬವರ ಮನೆಯ ಮುಂಭಾಗ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ಜೂಜಾಟದಲ್ಲಿ ಭಾಗಿಯಾಗಿದ್ದ 13 ಮಂದಿಯನ್ನು ಪೊಲೀಸರು ಬಂಽಸಿದ್ದು, 87,050 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ದಾಖಲಾಗಿವೆ.

ಮೂರನೇ ಪ್ರಕರಣದಲ್ಲಿ ಇಲವಾಲ ಬಳಿಯ ಕೆಆರ್‌ಎಸ್ ಬೈ ಪಾಸ್ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಇಲವಾಲ ಪೊಲೀಸರಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದಲ್ಲಿ ತೊಡಗದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪಣಕ್ಕಿಟ್ಟದ್ದ 51,140 ರೂ. ನಗದು ಹಾಗೂ 6 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂದ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

2 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

3 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

4 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

4 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

5 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

6 hours ago