ಮೈಸೂರು : ರೋಗಿಗಳ ಬಳಿ ಲಂಚ ವಸೂಲಿ ಮಾಡುತ್ತಿದ್ದ ಸರ್ಕಾರಿ ವೈದ್ಯೆ ಡಾ. ಕೋಮಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ
ನಗರದ ಉದಯಗಿರಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೋಮಲಾ,ಪ್ರತಿ ಸೇವೆಗೆ ಇಂತಿಷ್ಟು ಅಂತ ಆರೋಗ್ಯ ಕೇಂದ್ರದ ಸಿಬ್ಬಂದಿಯ ಮೂಲಕವೇ ಸಾರ್ವಜನಿಕರಿಂದ ಲಂಚ ವಸೂಲಿ ಮಾಡಿ, ದಿನಾಂತ್ಯದ ಹೊತ್ತಿಗೆ ಎಷ್ಟು ಕಲೆಕ್ಷನ್ ಆಗಿತ್ತೋ ಹಣದಲ್ಲಿ ಆರೋಗ್ಯ ಕೇಂದ್ರದ ಒಬ್ಬೊಬ್ಬರಿಗೆ ಇಂತಿಷ್ಟು ಅಂತ ಹಂಚುತ್ತಿದ್ದರು, ಆನಂತರ ತನ್ನ ಷೇರನ್ನು ಬ್ಯಾಗಿಗೆ ಹಾಕಿಕೊಂಡು ಮನೆಯತ್ತ ಹೆಜ್ಜೆ ಹಾಕುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.
ಆರೋಗ್ಯ ಕೇಂದ್ರದ ಸಿಬ್ಬಂದಿಯೊಬ್ಬರು ಕೋಮಲಾ ಅವರು ಸಂಜೆ ಮನೆಗೆ ತೆರಳುವ ಮುನ್ನ ಲಂಚದ ಹಣವನ್ನು ಸಿಬ್ಬಂದಿಗೆ ಹಂಚುತ್ತಿದ್ದ ವಿಡಿಯೋವೊಂದನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೋ ವೈರಲ್ ಆಗಿತ್ತು. ಅದನ್ನು ಆಧರಿಸಿ, ನಾನಾ ಮಾಧ್ಯಮಗಳು ವೈದ್ಯ ಕರ್ಮಕಾಂಡದ ಬಗ್ಗೆ ವಿಸ್ತ್ರೃತ ವರದಿಗಳನ್ನು ಮಾಡಿದ್ದವು. ಆ ಎಲ್ಲಾ ವರದಿಗಳನ್ನು ಗಮನಿಸಿದ ಆರೋಗ್ಯ ಇಲಾಖೆ, ಜು. 4ರಂದು ಮಧ್ಯಾಹ್ನದ ಹೊತ್ತಿಗೆ ಅಮಾನತು ಆದೇಶವನ್ನು ಹೊರಡಿಸಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…