ಮೈಸೂರು : ರೋಗಿಗಳ ಬಳಿ ಲಂಚ ವಸೂಲಿ ಮಾಡುತ್ತಿದ್ದ ಸರ್ಕಾರಿ ವೈದ್ಯೆ ಡಾ. ಕೋಮಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ
ನಗರದ ಉದಯಗಿರಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೋಮಲಾ,ಪ್ರತಿ ಸೇವೆಗೆ ಇಂತಿಷ್ಟು ಅಂತ ಆರೋಗ್ಯ ಕೇಂದ್ರದ ಸಿಬ್ಬಂದಿಯ ಮೂಲಕವೇ ಸಾರ್ವಜನಿಕರಿಂದ ಲಂಚ ವಸೂಲಿ ಮಾಡಿ, ದಿನಾಂತ್ಯದ ಹೊತ್ತಿಗೆ ಎಷ್ಟು ಕಲೆಕ್ಷನ್ ಆಗಿತ್ತೋ ಹಣದಲ್ಲಿ ಆರೋಗ್ಯ ಕೇಂದ್ರದ ಒಬ್ಬೊಬ್ಬರಿಗೆ ಇಂತಿಷ್ಟು ಅಂತ ಹಂಚುತ್ತಿದ್ದರು, ಆನಂತರ ತನ್ನ ಷೇರನ್ನು ಬ್ಯಾಗಿಗೆ ಹಾಕಿಕೊಂಡು ಮನೆಯತ್ತ ಹೆಜ್ಜೆ ಹಾಕುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.
ಆರೋಗ್ಯ ಕೇಂದ್ರದ ಸಿಬ್ಬಂದಿಯೊಬ್ಬರು ಕೋಮಲಾ ಅವರು ಸಂಜೆ ಮನೆಗೆ ತೆರಳುವ ಮುನ್ನ ಲಂಚದ ಹಣವನ್ನು ಸಿಬ್ಬಂದಿಗೆ ಹಂಚುತ್ತಿದ್ದ ವಿಡಿಯೋವೊಂದನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೋ ವೈರಲ್ ಆಗಿತ್ತು. ಅದನ್ನು ಆಧರಿಸಿ, ನಾನಾ ಮಾಧ್ಯಮಗಳು ವೈದ್ಯ ಕರ್ಮಕಾಂಡದ ಬಗ್ಗೆ ವಿಸ್ತ್ರೃತ ವರದಿಗಳನ್ನು ಮಾಡಿದ್ದವು. ಆ ಎಲ್ಲಾ ವರದಿಗಳನ್ನು ಗಮನಿಸಿದ ಆರೋಗ್ಯ ಇಲಾಖೆ, ಜು. 4ರಂದು ಮಧ್ಯಾಹ್ನದ ಹೊತ್ತಿಗೆ ಅಮಾನತು ಆದೇಶವನ್ನು ಹೊರಡಿಸಿದೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…