ಮೈಸೂರು : ರೋಗಿಗಳ ಬಳಿ ಲಂಚ ವಸೂಲಿ ಮಾಡುತ್ತಿದ್ದ ಸರ್ಕಾರಿ ವೈದ್ಯೆ ಡಾ. ಕೋಮಲಾ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ
ನಗರದ ಉದಯಗಿರಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೋಮಲಾ,ಪ್ರತಿ ಸೇವೆಗೆ ಇಂತಿಷ್ಟು ಅಂತ ಆರೋಗ್ಯ ಕೇಂದ್ರದ ಸಿಬ್ಬಂದಿಯ ಮೂಲಕವೇ ಸಾರ್ವಜನಿಕರಿಂದ ಲಂಚ ವಸೂಲಿ ಮಾಡಿ, ದಿನಾಂತ್ಯದ ಹೊತ್ತಿಗೆ ಎಷ್ಟು ಕಲೆಕ್ಷನ್ ಆಗಿತ್ತೋ ಹಣದಲ್ಲಿ ಆರೋಗ್ಯ ಕೇಂದ್ರದ ಒಬ್ಬೊಬ್ಬರಿಗೆ ಇಂತಿಷ್ಟು ಅಂತ ಹಂಚುತ್ತಿದ್ದರು, ಆನಂತರ ತನ್ನ ಷೇರನ್ನು ಬ್ಯಾಗಿಗೆ ಹಾಕಿಕೊಂಡು ಮನೆಯತ್ತ ಹೆಜ್ಜೆ ಹಾಕುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.
ಆರೋಗ್ಯ ಕೇಂದ್ರದ ಸಿಬ್ಬಂದಿಯೊಬ್ಬರು ಕೋಮಲಾ ಅವರು ಸಂಜೆ ಮನೆಗೆ ತೆರಳುವ ಮುನ್ನ ಲಂಚದ ಹಣವನ್ನು ಸಿಬ್ಬಂದಿಗೆ ಹಂಚುತ್ತಿದ್ದ ವಿಡಿಯೋವೊಂದನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೋ ವೈರಲ್ ಆಗಿತ್ತು. ಅದನ್ನು ಆಧರಿಸಿ, ನಾನಾ ಮಾಧ್ಯಮಗಳು ವೈದ್ಯ ಕರ್ಮಕಾಂಡದ ಬಗ್ಗೆ ವಿಸ್ತ್ರೃತ ವರದಿಗಳನ್ನು ಮಾಡಿದ್ದವು. ಆ ಎಲ್ಲಾ ವರದಿಗಳನ್ನು ಗಮನಿಸಿದ ಆರೋಗ್ಯ ಇಲಾಖೆ, ಜು. 4ರಂದು ಮಧ್ಯಾಹ್ನದ ಹೊತ್ತಿಗೆ ಅಮಾನತು ಆದೇಶವನ್ನು ಹೊರಡಿಸಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…