ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಸಂಪಿನಿಂದ ನೀರನ್ನು ಎತ್ತಿಸಿ, ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ಈ ಘಟನೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಬಿಳಗೆರೆ ಹುಂಡಿ ಗ್ರಾಮದಲ್ಲಿ ನಡೆದಿದೆ. ನವೆಂಬರ್.20 ರಂದು ಗ್ರಾಮಸ್ಥನಾದ ಸಿದ್ದರಾಜು ಅವರು ತಮ್ಮ ಮಗಳನ್ನು ಆಂಗನವಾಡಿಯಿಂದ ಕರೆತರಲು ಬಂದಾಗ ಶಾಲೆಯ ಮಕ್ಕಳು ಸಂಪಿನಿಂದ ನೀರೆತ್ತುತ್ತಿರುವ ದೃಶ್ಯ ಕಂಡು ಬಂದಿದೆ.
ನಾನು ಶಾಲಾ ಆವರಣದಲ್ಲಿರುವ ಸಂಪಿನಿಂದ ಮಕ್ಕಳು ನೀರು ಎಳೆಯುತ್ತಿರುವುದನ್ನು ಕಂಡೆ. ಮೊದಲಿಗೆ ಯಾರಾದರೂ ಒಳಗೆ ಬಿದ್ದಿರಬಹುದೆಂದು ಭಾವಿಸಿದೆ. ವಿಚಾರಿಸಿದಾಗ, ಶಿಕ್ಷಕರು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ನೀರು ತರುವಂತೆ ಹೇಳಿದ್ದಾಗಿ ಮಕ್ಕಳು ಹೇಳಿದರು. ನಾನು ಈ ಘಟನೆಯನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಬ್ಲಾಕ್ ಎಜ್ಯುಕೇಶನ್ ಆಫೀಸರ್ (BEO) ಅವರಿಗೆ ದೂರು ನೀಡಿದೆ. BEO ಅವರ ನಿರ್ದೇಶನದಂತೆ ನಂತರ ಲಿಖಿತ ದೂರನ್ನು ಕೂಡ ಸಲ್ಲಿಸಿದೆ. ವಿಡಿಯೋ ಮತ್ತು ದೂರು ಎರಡನ್ನೂ ಡಿಡಿಪಿಐಗೆ ಕಳುಹಿಸಲಾಗುವುದು ಎಂದು ಅವರು ಭರವಸೆ ನೀಡಿದರು ಎಂದು ಸಿದ್ದರಾಜು ಹೇಳಿದರು.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…