ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಸಂಪಿನಿಂದ ನೀರನ್ನು ಎತ್ತಿಸಿ, ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ಈ ಘಟನೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಬಿಳಗೆರೆ ಹುಂಡಿ ಗ್ರಾಮದಲ್ಲಿ ನಡೆದಿದೆ. ನವೆಂಬರ್.20 ರಂದು ಗ್ರಾಮಸ್ಥನಾದ ಸಿದ್ದರಾಜು ಅವರು ತಮ್ಮ ಮಗಳನ್ನು ಆಂಗನವಾಡಿಯಿಂದ ಕರೆತರಲು ಬಂದಾಗ ಶಾಲೆಯ ಮಕ್ಕಳು ಸಂಪಿನಿಂದ ನೀರೆತ್ತುತ್ತಿರುವ ದೃಶ್ಯ ಕಂಡು ಬಂದಿದೆ.
ನಾನು ಶಾಲಾ ಆವರಣದಲ್ಲಿರುವ ಸಂಪಿನಿಂದ ಮಕ್ಕಳು ನೀರು ಎಳೆಯುತ್ತಿರುವುದನ್ನು ಕಂಡೆ. ಮೊದಲಿಗೆ ಯಾರಾದರೂ ಒಳಗೆ ಬಿದ್ದಿರಬಹುದೆಂದು ಭಾವಿಸಿದೆ. ವಿಚಾರಿಸಿದಾಗ, ಶಿಕ್ಷಕರು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ನೀರು ತರುವಂತೆ ಹೇಳಿದ್ದಾಗಿ ಮಕ್ಕಳು ಹೇಳಿದರು. ನಾನು ಈ ಘಟನೆಯನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಬ್ಲಾಕ್ ಎಜ್ಯುಕೇಶನ್ ಆಫೀಸರ್ (BEO) ಅವರಿಗೆ ದೂರು ನೀಡಿದೆ. BEO ಅವರ ನಿರ್ದೇಶನದಂತೆ ನಂತರ ಲಿಖಿತ ದೂರನ್ನು ಕೂಡ ಸಲ್ಲಿಸಿದೆ. ವಿಡಿಯೋ ಮತ್ತು ದೂರು ಎರಡನ್ನೂ ಡಿಡಿಪಿಐಗೆ ಕಳುಹಿಸಲಾಗುವುದು ಎಂದು ಅವರು ಭರವಸೆ ನೀಡಿದರು ಎಂದು ಸಿದ್ದರಾಜು ಹೇಳಿದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…