ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಸಂಪಿನಿಂದ ನೀರನ್ನು ಎತ್ತಿಸಿ, ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ಈ ಘಟನೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಬಿಳಗೆರೆ ಹುಂಡಿ ಗ್ರಾಮದಲ್ಲಿ ನಡೆದಿದೆ. ನವೆಂಬರ್.20 ರಂದು ಗ್ರಾಮಸ್ಥನಾದ ಸಿದ್ದರಾಜು ಅವರು ತಮ್ಮ ಮಗಳನ್ನು ಆಂಗನವಾಡಿಯಿಂದ ಕರೆತರಲು ಬಂದಾಗ ಶಾಲೆಯ ಮಕ್ಕಳು ಸಂಪಿನಿಂದ ನೀರೆತ್ತುತ್ತಿರುವ ದೃಶ್ಯ ಕಂಡು ಬಂದಿದೆ.
ನಾನು ಶಾಲಾ ಆವರಣದಲ್ಲಿರುವ ಸಂಪಿನಿಂದ ಮಕ್ಕಳು ನೀರು ಎಳೆಯುತ್ತಿರುವುದನ್ನು ಕಂಡೆ. ಮೊದಲಿಗೆ ಯಾರಾದರೂ ಒಳಗೆ ಬಿದ್ದಿರಬಹುದೆಂದು ಭಾವಿಸಿದೆ. ವಿಚಾರಿಸಿದಾಗ, ಶಿಕ್ಷಕರು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ನೀರು ತರುವಂತೆ ಹೇಳಿದ್ದಾಗಿ ಮಕ್ಕಳು ಹೇಳಿದರು. ನಾನು ಈ ಘಟನೆಯನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಬ್ಲಾಕ್ ಎಜ್ಯುಕೇಶನ್ ಆಫೀಸರ್ (BEO) ಅವರಿಗೆ ದೂರು ನೀಡಿದೆ. BEO ಅವರ ನಿರ್ದೇಶನದಂತೆ ನಂತರ ಲಿಖಿತ ದೂರನ್ನು ಕೂಡ ಸಲ್ಲಿಸಿದೆ. ವಿಡಿಯೋ ಮತ್ತು ದೂರು ಎರಡನ್ನೂ ಡಿಡಿಪಿಐಗೆ ಕಳುಹಿಸಲಾಗುವುದು ಎಂದು ಅವರು ಭರವಸೆ ನೀಡಿದರು ಎಂದು ಸಿದ್ದರಾಜು ಹೇಳಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…