ಮೈಸೂರು : ನಗರದ ಶ್ರೀ ಗುರು ಪುಟ್ಟರಾಜ ಸಂಗೀತ ಸಭಾದ ಶಾಲೆಯ ಸ್ಥಾಪಕ, ತಬಲಾ ವಾದಕ ಭೀಮಾಶಂಕರ ಬಿದನೂರ ಅವರಿಗೆ ಅವರ ಶಿಷ್ಯ ರೋಹಿತ್ ಕಳಲೆ ಅವರಿಂದ ಗುರು ಅಭಿವಂದನೆ ಕಾರ್ಯಕ್ರಮ ಆಗಸ್ಟ್ 26ರಂದು ಸಂಜೆ 5.30 ಗಂಟೆಗೆ ಇಲ್ಲಿನ ರಾಮಕೃಷ್ಣನಗರದ ರಮಾಗೋವಿಂದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಅಂದು ಶ್ರೀ ಗುರು ಪುಟ್ಟರಾಜ ಸಂಗೀತ ಸಭಾ ವಿದ್ಯಾರ್ಥಿಗಳಿಂದ ತಬಲಾ ವಾದನ, ಪಂ.ರವಿಶಂಕರ್ ಮಿಶ್ರಾ ಅವರಿಂದ ಕೊಳಲು ವಾದನ, ಭೀಮಾಶಂಕರ ಬಿದನೂರ ಹಾಗೂ ಕು.ರೋಹಿತ್ ಕಳಲೆ ಅವರಿಂದ ತಬಲಾ ಜುಗಲ್ ಬಂದಿ ಕಛೇರಿ ನಡೆಯಲಿದೆ. ನಂತರ ಪಂ.ವೀರಭದ್ರಯ್ಯ ಹಿರೇಮಠ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಮೃತ್ಯುಂಜಯ ಹಿರೇಮಠ ಹಾಗೂ ವಿಘ್ನೇಶ್ ಭಾಗ್ವತ್ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.
ಕಾರ್ಯಕ್ರಮ ಸರಿಯಾದ ಸಮಯಕ್ಕೆ ಶುರುವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಹೃದಯರು ಆಗಮಿಸಬೇಕೆಂದು ರೋಹಿತ್ ಹೆತ್ತವರಾದ ಆಶಾ ಹಾಗೂ ಭಾಸ್ಕರ್ ಕಳಲೆ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…