ಮೈಸೂರು : ನಗರದ ಶ್ರೀ ಗುರು ಪುಟ್ಟರಾಜ ಸಂಗೀತ ಸಭಾದ ಶಾಲೆಯ ಸ್ಥಾಪಕ, ತಬಲಾ ವಾದಕ ಭೀಮಾಶಂಕರ ಬಿದನೂರ ಅವರಿಗೆ ಅವರ ಶಿಷ್ಯ ರೋಹಿತ್ ಕಳಲೆ ಅವರಿಂದ ಗುರು ಅಭಿವಂದನೆ ಕಾರ್ಯಕ್ರಮ ಆಗಸ್ಟ್ 26ರಂದು ಸಂಜೆ 5.30 ಗಂಟೆಗೆ ಇಲ್ಲಿನ ರಾಮಕೃಷ್ಣನಗರದ ರಮಾಗೋವಿಂದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಅಂದು ಶ್ರೀ ಗುರು ಪುಟ್ಟರಾಜ ಸಂಗೀತ ಸಭಾ ವಿದ್ಯಾರ್ಥಿಗಳಿಂದ ತಬಲಾ ವಾದನ, ಪಂ.ರವಿಶಂಕರ್ ಮಿಶ್ರಾ ಅವರಿಂದ ಕೊಳಲು ವಾದನ, ಭೀಮಾಶಂಕರ ಬಿದನೂರ ಹಾಗೂ ಕು.ರೋಹಿತ್ ಕಳಲೆ ಅವರಿಂದ ತಬಲಾ ಜುಗಲ್ ಬಂದಿ ಕಛೇರಿ ನಡೆಯಲಿದೆ. ನಂತರ ಪಂ.ವೀರಭದ್ರಯ್ಯ ಹಿರೇಮಠ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಮೃತ್ಯುಂಜಯ ಹಿರೇಮಠ ಹಾಗೂ ವಿಘ್ನೇಶ್ ಭಾಗ್ವತ್ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.
ಕಾರ್ಯಕ್ರಮ ಸರಿಯಾದ ಸಮಯಕ್ಕೆ ಶುರುವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಹೃದಯರು ಆಗಮಿಸಬೇಕೆಂದು ರೋಹಿತ್ ಹೆತ್ತವರಾದ ಆಶಾ ಹಾಗೂ ಭಾಸ್ಕರ್ ಕಳಲೆ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…