ಮೈಸೂರು: ಮೈಸೂರಿನ ಖ್ಯಾತ ಜನಪದ ಗಾಯಕ, ಕಲಾವಿದರಾದ ಡಾ. ಮೈಸೂರು ಗುರುರಾಜು ಅವರಿಗೆ ʼಜನಪದ ಕಂಠೀರವʼ ರಾಷ್ಟ್ರ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲಂ ಮತ್ತು ಕಲ್ಚರ್ ಅಕಾಡೆಮಿಯಲ್ಲಿ ಅಂತರಾಷ್ಟ್ರೀಯ ಜನಪದ ದಿನಾಚರಣೆ ಪ್ರಯುಕ್ತ ʼಜನಪದ ಸಿರಿ ಕನ್ನಡʼ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಜನಪದ ಸಿರಿ-2024 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ಮೈಸೂರು ಗುರುರಾಜು ಅವರಿಗೆ ʼಜನಪದ ಕಂಠೀರವʼ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಕಲಾವಿದರಾದ ಬಾನಂದೂರು ಕೆಂಪಯ್ಯ ಅವರಿಗೆ ಜನಪದ ಜಂಗಮ ರಾಷ್ಟ್ರೀಯ ಪ್ರಶಸ್ತಿ ನೀಡಿ ನೀಡಲಾಯಿತು.
ಈ ಸಂದರ್ಭದಲ್ಲಿ ಬೇಲಿಮಠದ ಶಿವರುದ್ರ ಸ್ವಾಮೀಜಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಾ. ಹಿ.ಚಿ ಬೋರಲಿಂಗಯ್ಯ, ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ವೇಮಗಲ್ ನಾರಾಯಣಸ್ವಾಮಿ, ಜನಪದ ಸಿರಿ ಕನ್ನಡ ಸಂಸ್ಥಾಪಕ ಜರಗನ ಹಳ್ಳಿ ಕಾಂತರಾಜು ಹಾಜರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…