ಮೈಸೂರು : ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದ್ದು ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ ರೂ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈಗ ಎರಡನೇ ಹಂತದಲ್ಲಿ ಮೈಸೂರಿನ ನಗರದ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನ್ ರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು ಹಾಗೂ ಮೈಸೂರು ಗತವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಅವರು ಸ್ಥಳೀಯ ಪ್ರವಾಸೋದ್ಯಮ ಸಕ್ರ್ಯೂಟ್ ಮತ್ತು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತಾ ವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿಗಳಾದ ಡಾ. ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ.ಎಸ್ ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…