ಮೈಸೂರು : ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದ್ದು ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ ರೂ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈಗ ಎರಡನೇ ಹಂತದಲ್ಲಿ ಮೈಸೂರಿನ ನಗರದ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನ್ ರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು ಹಾಗೂ ಮೈಸೂರು ಗತವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಅವರು ಸ್ಥಳೀಯ ಪ್ರವಾಸೋದ್ಯಮ ಸಕ್ರ್ಯೂಟ್ ಮತ್ತು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತಾ ವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿಗಳಾದ ಡಾ. ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ.ಎಸ್ ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…