ಮೈಸೂರು

ಮೈಸೂರು| ಮಾನವ ಮತ್ತು ಪ್ರಾಣಿ ಸಂಘರ್ಷ: ಪ್ರಮುಖ ದಾಳಿಗಳ ಕುರಿತ ಮಾಹಿತಿ

ಮೈಸೂರು : ಹಳೇ ಮೈಸೂರು ಪ್ರಾಂತ್ಯಕ್ಕೆ ಸೇರಿದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುಲಿ ಮತ್ತು ಆನೆ ದಾಳಿ ಹೆಚ್ಚಾಗಿದ್ದು, ಮಾವನ ಮತ್ತು ಪ್ರಾಣಿ ಸಂಘರ್ಷಕ್ಕೆ ಕೊನೆ ಎಂದು ಎಂಬುದು ಜನರ ಕೂಗಾಗಿದೆ.

ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ ಸೇರಿದಂತೆ ಕಾಡಂಚಿನ ಊರುಗಳಲ್ಲಿ ನಿರಂತರವಾಗಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಲೇ ಇರುತ್ತದೆ. ಇದರಲ್ಲಿ ಪ್ರಾಣಿಗಳ ಸಾವಿಗಿಂತ ಮಾನವರ ಸಾವಿನ ಸಂಖ್ಯೆಯೇ ಹೆಚ್ಚಾಗಿದೆ. ಆದರೆ ಘನವೆತ್ತ ಸರ್ಕಾರ ಇವುಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ತೆಗೆದುಕೊಂಡ ಕ್ರಮಗಳು ಮತ್ತು ಯೋಜನೆಗಳು ಯಾವುವು ಎಂಬುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.

ಕಳೆದ ನಾಲ್ಕು ತಿಂಗಳಿನಿಂದ ನಡೆದಿರುವ ಮಾನವ ಮತ್ತು ಪ್ರಾಣಿ ಸಂಘರ್ಷ ನಡುವಿನ ಪ್ರಮುಖ ದಾಳಿಗಳ ಕುರಿತ ಮಾಹಿತಿ ಇಲ್ಲಿದೆ.

ಹುಲಿ/ಮಾನವ ಸಂಘರ್ಷ
ನವೆಂಬರ್‌.೨೪ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ಮಹಿಳೆ ರತ್ನಮ್ಮ ಹುಲಿ ದಾಳಿಗೆ ತುತ್ತಾಗಿದ್ದರು.

ನವೆಂಬರ್‌.೦೮ ಸರಗೂರು ತಾಲೂಕಿನ ಕಾಡಬೇಗೂರು ಗ್ರಾಮದ, ಗ್ರಾ.ಪಂ ಸದಸ್ಯ ಬಾಲಾಜಿ ನಾಯ್ಕ ಹುಲಿ ದಾಳಿಯಿಂದ ಸಾವನ್ನಪ್ಪಿದ್ದಾರೆ.

ಅಕ್ಟೋಬರ್‌.೦೩ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ರೈತ ಗಣೇಶ್‌ ಹುಲಿ ದಾಳಿಗೆ ಬಲಿ.

ಅಕ್ಟೋಬರ್.‌೩೧ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವನಗರದಲ್ಲಿ ಹುಲಿ ದಾಳಿಗೆ ಹಸು ಬಲಿ, ದನಗಾಹಿ ವೀರಭದ್ರ ಹುಲಿ ದಾಳಿಯಿಂದ ಗಾಯಗೊಂಡಿದ್ದರು.

ಸೆಪ್ಟೆಂಬರ್‌.೨೨ ಪಿರಿಯಾಪಟ್ಟಣ ತಾಲೂಕಿನ ಮುದ್ದನಹಳ್ಳಿ ಕೊಪ್ಪಲು ಗ್ರಾಮದ ರಮೇಶ್‌ ಹುಲಿ ದಾಳಿಯಿಂದ ಗಾಯಗೊಂಡಿದ್ದರು.

ಸೆಪ್ಟೆಂಬರ್‌.೦೪ ಎಚ್‌ಡಿ ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದ ಬಾಲಕ ಚರಣ್‌ ಹುಲಿ ದಾಳಿಗೆ ತುತ್ತಾಗಿದ್ದಾನೆ.

ಆನೆ/ಮಾನವ ಸಂಘರ್ಷ
ನವೆಂಬರ್‌.೨೦ ಮಂಡ್ಯ ತಾಲೂಕಿನ ಲಾಳನಕೆರೆಯ ಸಾಕಮ್ಮ ಎಂಬುವವರು ಆನೆ ದಾಳಿಯಿಂದ ಮೃತರಾಗಿದ್ದಾರೆ.

ಸೆಪ್ಟೆಂಬರ್‌.೦೨ ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ಸಿದ್ದರಾಜ ನಾಯ್ಕ ಎಂಬುವವರ ಮೇಲೆ ಆನೆ ಗಂಭೀರವಾಗಿ ದಾಳಿ ಮಾಡಿತ್ತು.

ಆಗಸ್ಟ್‌.೧೪ ಮಡಿಕೇರಿಯ ಅರೆಕೋಡು ಗ್ರಾಮದ ನಿವಾಸಿ ಕಟ್ಟೇಮಾಡು ದೇವಪ್ಪ ಆನೆ ದಾಳಿಗೆ ಬಲಿ.

ಆಗಸ್ಟ್‌.೨೫ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಡಿನಾಡೂರು ಗ್ರಾಮದಲ್ಲಿ ಈರಪ್ಪ ಆನೆ ದಾಳಿಯಿಂದ ಸ್ಥಳದಲ್ಲೇ ಮೃತಪಟ್ಟಿದ್ದರು.

andolanait

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

19 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

19 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

19 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

19 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

19 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

19 hours ago