ಮೈಸೂರು: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಬೆಲೆಬಾಳುವ ಲ್ಯಾಪ್ಟಾಪ್ ಅನ್ನು ಮೈಸೂರು ಜನತಾನಗರದ ಆಟೋ ಚಾಲಕ ಸುರೇಶ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರಿನ ನಿವಾಸಿ ಕಿಶೋರ್ ಅತ್ತಾವರ್ ಅವರು ಭಾನುವಾರ ಮುಂಜಾನೆ ಮೂರುವರೆ ಸಮಯದಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.ಅಲ್ಲಿಂದ ಅವರು ಬೋಗಾದಿ ಎರಡನೆ ಹಂತದ ಸಿಎಫ್ ಟಿಆರ್ ಐ ಬಡಾವಣೆಯಲ್ಲಿರುವ ಸ್ನೇಹಿತ ಡಾ.ಎ.ಬಿ.ಅರುಣ್ ಕುಮಾರ್ ಅವರ ಮನೆಗೆ ಆಟೋದಲ್ಲಿ ಬಂದಿದ್ದಾರೆ. ಈ ಸಂದರ್ಭ ಲ್ಯಾಪ್ಟಾಪ್ ಅನ್ನು ಆಟೋದಲ್ಲೇ ಮರೆತ್ತಿದ್ದಾರೆ.
ನಂತರ ರೈಲ್ವೆ ನಿಲ್ದಾಣಕ್ಕೆ ಹೋಗಿ ಆಟೋಗಾಗಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಪೆಚ್ಚುಮೊರೆ ಹಾಕಿಕೊಂಡು ಮನೆಗೆ ಹಿಂತಿರುಗಿದಾಗ ಅವರಿಗೊಂದು ಆಶ್ಚರ್ಯ ಕಾದಿತ್ತು ಚಾಲಕ ಸುರೇಶ್ ಇವರ ಮನೆಗೆ ಬಂದು ಲ್ಯಾಪ್ಟಾಪ್ನ್ನು ಹಿಂತಿರುಗಿಸಿದ್ದರು. ಆತನ ಪ್ರಾಮಾಣಿಕತೆಗೆ ಅಭಿನಂದಿಸಲಾಯಿತು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…