ಮೈಸೂರು: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಬೆಲೆಬಾಳುವ ಲ್ಯಾಪ್ಟಾಪ್ ಅನ್ನು ಮೈಸೂರು ಜನತಾನಗರದ ಆಟೋ ಚಾಲಕ ಸುರೇಶ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರಿನ ನಿವಾಸಿ ಕಿಶೋರ್ ಅತ್ತಾವರ್ ಅವರು ಭಾನುವಾರ ಮುಂಜಾನೆ ಮೂರುವರೆ ಸಮಯದಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.ಅಲ್ಲಿಂದ ಅವರು ಬೋಗಾದಿ ಎರಡನೆ ಹಂತದ ಸಿಎಫ್ ಟಿಆರ್ ಐ ಬಡಾವಣೆಯಲ್ಲಿರುವ ಸ್ನೇಹಿತ ಡಾ.ಎ.ಬಿ.ಅರುಣ್ ಕುಮಾರ್ ಅವರ ಮನೆಗೆ ಆಟೋದಲ್ಲಿ ಬಂದಿದ್ದಾರೆ. ಈ ಸಂದರ್ಭ ಲ್ಯಾಪ್ಟಾಪ್ ಅನ್ನು ಆಟೋದಲ್ಲೇ ಮರೆತ್ತಿದ್ದಾರೆ.
ನಂತರ ರೈಲ್ವೆ ನಿಲ್ದಾಣಕ್ಕೆ ಹೋಗಿ ಆಟೋಗಾಗಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಪೆಚ್ಚುಮೊರೆ ಹಾಕಿಕೊಂಡು ಮನೆಗೆ ಹಿಂತಿರುಗಿದಾಗ ಅವರಿಗೊಂದು ಆಶ್ಚರ್ಯ ಕಾದಿತ್ತು ಚಾಲಕ ಸುರೇಶ್ ಇವರ ಮನೆಗೆ ಬಂದು ಲ್ಯಾಪ್ಟಾಪ್ನ್ನು ಹಿಂತಿರುಗಿಸಿದ್ದರು. ಆತನ ಪ್ರಾಮಾಣಿಕತೆಗೆ ಅಭಿನಂದಿಸಲಾಯಿತು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…