ಮೈಸೂರು

ಮೈಸೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆ

ಮೈಸೂರು:  ಮೈಸೂರು ಜಿಲ್ಲೆಯ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಅಧೀನದ ಅಡಿಯಲ್ಲಿ 163 ಸರ್ಕಾರಿ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.

ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡಗಳನ್ನು ತಡೆಗಟ್ಟಲು, ಕಟ್ಟಡದಲ್ಲಿ ಅಗ್ನಿ ನಿರೋಧಕ ವ್ಯವಸ್ಥೆಗಳಾದ ಹೈಡ್ರೆಂಟ್, ಹೋಜ್‌ರೀಲ್, ಪ್ರತ್ಯೇಕ ನೀರು ಸಂಗ್ರಹಣೆ ತೊಟ್ಟಿ, ಫೈರ್‌ ಅಲರಾಮ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ, ಒಂದೆಡೆ ಸುರಕ್ಷಿತವಾಗಿ ಸೇರಲು ಅಗ್ನಿ ಸುರಕ್ಷಿತ ಸ್ಥಳಗಳನ್ನು ಗುರುತಿಸಲಾಗಿದೆ. ಅಗ್ನಿ ಅವಘಡಗಳಲ್ಲಿ ಹೋರಾಡುವ ಬಗ್ಗೆ ಅಗ್ನಿ ನಿರೋಧಕಗಳನ್ನು ಬಳಸುವ ಬಗ್ಗೆ, ಮಾಹಿತಿ ಶಿಕ್ಷಣ, ಸಂಪರ್ಕ ಸೂಚನಾ ಫಲಕ ಅಳವಡಿಸಲಾಗಿದೆ. ಎಲ್ಲಾ ಸಿಬ್ಬಂದಿಗಳಿಗೆ ಅಗ್ನಿ ಅನಾಹುತಗಳನ್ನು ತಡೆಗಟ್ಟಲು ಹಾಗೂ ವಿವಿಧ ರೀತಿಯ ಅಗ್ನಿ ಅನಾಹುತಗಳನ್ನು ತಡೆಗಟ್ಟುವ ಕುರಿತಂತೆ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದ್ದು, ಆಸ್ಪತ್ರೆಯ ಹಂತದಲ್ಲಿ ಅಗ್ನಿಶಾಮಕ ತಂಡವನ್ನು ರಚಿಸಲಾಗಿದೆ.

ಮೈಸೂರು ಜಿಲ್ಲೆಯ 6 ತಾಲ್ಲೂಕು ಆಸ್ಪತ್ರೆಗಳಲ್ಲಿ, ನಂಜನಗೂಡು, ಹೆಚ್.ಡಿ.ಕೋಟೆ, ಕೆ.ಆರ್‌ನಗರ, ಟಿ.ನರಸಿಪುರ ಆಸ್ಪತ್ರೆಗಳಲ್ಲಿ ಹಾಗೂ 9 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸುವ ಕುರಿತಂತೆ ಮುನ್ನೆಚರಿಕೆ ಕ್ರಮವಾಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಂದ ಅಗ್ನಿದುರಂತಗಳ ಪರಿಶೀಲನೆ (ಆಡಿಟ್) ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತಂತೆ ವರದಿ ಪಡೆಯಲಾಗಿದೆ. 146 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವ ಕುರಿತಂತೆ, ಆಸ್ಪತ್ರೆಯ ಎಲ್ಲಾ ವಿಭಾಗ ಮತ್ತು ರೋಗಿ ಆರೈಕೆ ವಿಭಾಗಗಳಲ್ಲಿ ಹಾಗೂ ತುರ್ತು ನಿರ್ವಾಹಣ ಘಟಕಗಳು, ಶಸ್ತçಚಿಕಿತ್ಸಾ ವಿಭಾಗ, ಒಳ ಮತ್ತು ಹೊರ ರೋಗಿ ವಿಭಾಗಗಳಲ್ಲಿ, ಎ.ಬಿ.ಸಿ ಪ್ರಕಾರದ ಅಗ್ನಿ ನಿರೋಧಕಗಳನ್ನು ಅಳವಡಿಸಲಾಗಿದೆ.

ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಅಗ್ನಿ ಸುರಕ್ಷತಾ ಕ್ರಮಗಳ ಕುರಿತಂತೆ, ಕೆಪಿಎಂಇ ನಿಯಮಗಳ ಅಡಿಯಲ್ಲಿ ಸಂಸ್ಥೆಗಳು ಪರವಾನಿಗೆ ಪತ್ರ ಪಡೆಯುವ ಮುನ್ನ ಮತ್ತು ಪರವಾನಿಗೆ ನವೀಕರಿಸುವ ಸಮಯದಲ್ಲೇ, ಅಗ್ನಿ ಸುರಕ್ಷತ ಕ್ರಮಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಕೆಪಿಎಂಇ ತಂಡವು ಮೇಲ್ವಿಚಾರಣೆ ನಡೆಸಿ ಖಾತರಿ ಪಡಿಸಿಕೊಂಡ ನಂತರವೇ ಪರವಾನಿಗೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

4 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

4 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

5 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

5 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

6 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 hours ago