Man is reaching his hand to push fire alarm hand station
ಮೈಸೂರು: ಮೈಸೂರು ಜಿಲ್ಲೆಯ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಅಧೀನದ ಅಡಿಯಲ್ಲಿ 163 ಸರ್ಕಾರಿ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.
ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡಗಳನ್ನು ತಡೆಗಟ್ಟಲು, ಕಟ್ಟಡದಲ್ಲಿ ಅಗ್ನಿ ನಿರೋಧಕ ವ್ಯವಸ್ಥೆಗಳಾದ ಹೈಡ್ರೆಂಟ್, ಹೋಜ್ರೀಲ್, ಪ್ರತ್ಯೇಕ ನೀರು ಸಂಗ್ರಹಣೆ ತೊಟ್ಟಿ, ಫೈರ್ ಅಲರಾಮ್ಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ, ಒಂದೆಡೆ ಸುರಕ್ಷಿತವಾಗಿ ಸೇರಲು ಅಗ್ನಿ ಸುರಕ್ಷಿತ ಸ್ಥಳಗಳನ್ನು ಗುರುತಿಸಲಾಗಿದೆ. ಅಗ್ನಿ ಅವಘಡಗಳಲ್ಲಿ ಹೋರಾಡುವ ಬಗ್ಗೆ ಅಗ್ನಿ ನಿರೋಧಕಗಳನ್ನು ಬಳಸುವ ಬಗ್ಗೆ, ಮಾಹಿತಿ ಶಿಕ್ಷಣ, ಸಂಪರ್ಕ ಸೂಚನಾ ಫಲಕ ಅಳವಡಿಸಲಾಗಿದೆ. ಎಲ್ಲಾ ಸಿಬ್ಬಂದಿಗಳಿಗೆ ಅಗ್ನಿ ಅನಾಹುತಗಳನ್ನು ತಡೆಗಟ್ಟಲು ಹಾಗೂ ವಿವಿಧ ರೀತಿಯ ಅಗ್ನಿ ಅನಾಹುತಗಳನ್ನು ತಡೆಗಟ್ಟುವ ಕುರಿತಂತೆ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದ್ದು, ಆಸ್ಪತ್ರೆಯ ಹಂತದಲ್ಲಿ ಅಗ್ನಿಶಾಮಕ ತಂಡವನ್ನು ರಚಿಸಲಾಗಿದೆ.
ಮೈಸೂರು ಜಿಲ್ಲೆಯ 6 ತಾಲ್ಲೂಕು ಆಸ್ಪತ್ರೆಗಳಲ್ಲಿ, ನಂಜನಗೂಡು, ಹೆಚ್.ಡಿ.ಕೋಟೆ, ಕೆ.ಆರ್ನಗರ, ಟಿ.ನರಸಿಪುರ ಆಸ್ಪತ್ರೆಗಳಲ್ಲಿ ಹಾಗೂ 9 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸುವ ಕುರಿತಂತೆ ಮುನ್ನೆಚರಿಕೆ ಕ್ರಮವಾಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಂದ ಅಗ್ನಿದುರಂತಗಳ ಪರಿಶೀಲನೆ (ಆಡಿಟ್) ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತಂತೆ ವರದಿ ಪಡೆಯಲಾಗಿದೆ. 146 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವ ಕುರಿತಂತೆ, ಆಸ್ಪತ್ರೆಯ ಎಲ್ಲಾ ವಿಭಾಗ ಮತ್ತು ರೋಗಿ ಆರೈಕೆ ವಿಭಾಗಗಳಲ್ಲಿ ಹಾಗೂ ತುರ್ತು ನಿರ್ವಾಹಣ ಘಟಕಗಳು, ಶಸ್ತçಚಿಕಿತ್ಸಾ ವಿಭಾಗ, ಒಳ ಮತ್ತು ಹೊರ ರೋಗಿ ವಿಭಾಗಗಳಲ್ಲಿ, ಎ.ಬಿ.ಸಿ ಪ್ರಕಾರದ ಅಗ್ನಿ ನಿರೋಧಕಗಳನ್ನು ಅಳವಡಿಸಲಾಗಿದೆ.
ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಅಗ್ನಿ ಸುರಕ್ಷತಾ ಕ್ರಮಗಳ ಕುರಿತಂತೆ, ಕೆಪಿಎಂಇ ನಿಯಮಗಳ ಅಡಿಯಲ್ಲಿ ಸಂಸ್ಥೆಗಳು ಪರವಾನಿಗೆ ಪತ್ರ ಪಡೆಯುವ ಮುನ್ನ ಮತ್ತು ಪರವಾನಿಗೆ ನವೀಕರಿಸುವ ಸಮಯದಲ್ಲೇ, ಅಗ್ನಿ ಸುರಕ್ಷತ ಕ್ರಮಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಕೆಪಿಎಂಇ ತಂಡವು ಮೇಲ್ವಿಚಾರಣೆ ನಡೆಸಿ ಖಾತರಿ ಪಡಿಸಿಕೊಂಡ ನಂತರವೇ ಪರವಾನಿಗೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…