ಮೈಸೂರು

ಮೈಸೂರು | ವಿದೇಶಿ ಮಹಿಳೆ ಜೊತೆ ಅನುಚಿತ ವರ್ತನೆ ;ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮ

ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ

ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮೈಸೂರು : ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.

ವಿದೇಶಿ ಮಹಿಳೆಯ ಸಮಯಪ್ರಜ್ಞೆ ಆಕೆಯನ್ನ ಅನಾಹುತದಿಂದ ಪಾರು ಮಾಡಿದೆ.ಅಪರಿಚಿತನ ವಿರುದ್ದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಯು.ಕೆ.ಪ್ರಜೆ 45 ವರ್ಷದ ಮಹಿಳೆಯಿಂದ ಪ್ರಕರಣ ದಾಖಲಾಗಿದೆ.ಜುಲೈ 18 ರಂದು ಯೋಗಾಭ್ಯಾಸಕ್ಕಾಗಿ ಪ್ರವಾಸಿ ವೀಸಾದಲ್ಲಿ ಬಂದ ಯು.ಕೆ.ಮಹಿಳೆ ಗೋಕುಲಂ ಬಡಾವಣೆಯಲ್ಲಿ ತಂಗಿದ್ದರು.27-7-2025 ರ ರಾತ್ರಿ ಸುಮಾರು 11.45 ರಲ್ಲಿ ಬಾಗಿಲು ತಟ್ಟಿದ ಶಬ್ದವಾಗಿದೆ.ಫುಡ್ ಡೆಲಿವರಿ ಬಾಯ್ ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.ಫುಡ್ ಆರ್ಡರ್ ಮಾಡಿಲ್ಲವೆಂದು ಹೇಳುತ್ತಿದ್ದ ವೇಳೆ ಮಹಿಳೆಯನ್ನ ಬೆಡ್ ಮೇಲೆ ತಳ್ಳಿ ಬಾಗಿಲು ಚಿಲಕ ಹಾಕುವ ಪ್ರಯತ್ನ ಮಾಡಿದ್ದಾನೆ.ಈ ವೇಳೆ ಮಹಿಳೆ ಕಿರುಚಲು ಪ್ರಯತ್ನಿಸಿದಾಗ ಬಾಯಿಮುಚ್ಚಿದ್ದಾನೆ. ಆತನನ್ನ ತಳ್ಳಿ ಮಹಿಳೆ ಹೊರಬಂದು ಕಿರುಚಾಡಿದಾಗ ರಾಜೀವ್ ಎಂಬುವರು ಸಹಾಯಕ್ಕೆ ಬಂದಿದ್ದಾರೆ. ಅಪರಿಚಿತನನ್ನು ಮನೆಯೊಳಗೆ ತಳ್ಳಿ ಹೊರಗಿನಿಂದ ಬಾಗಿಲು ಭದ್ರಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಬರುವಷ್ಟರಲ್ಲಿ ಬಾಲ್ಕನಿಯಿಂದ ಕಿಡಿಗೇಡಿ ಪರಾರಿಯಾಗಿದ್ದಾನೆ.

ನೊಂದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

3 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

4 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

4 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

5 hours ago