ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಟ್ರಸ್ಟ್(ಇಂಟಾಚ್) ತಂಡ ಲ್ಯಾನ್ಸ್ಡೌನ್ ಕಟ್ಟಡದ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿತು.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಇಂಟಾಚ್ ತಂಡ ಗುರುವಾರ ಮೈಸೂರಿಗೆ ಆಗಮಿಸಿ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪರಿಶೀಲಿಸಿ ಅಧ್ಯಯನ ನಡೆಸಿತು. ಇಂಟಾಚ್ ತಂಡದ ರಘುನಾಥ್ ಅವರ ನೇತೃತ್ವದಲ್ಲಿ ಮನೀಷ್, ಸಿದ್ದಾರ್ಥ, ಜೀತಾ, ಅಮೃತಾ ಅವರು ಕಟ್ಟಡವನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರು.
ಮಾರುಕಟ್ಟೆ ಕಟ್ಟಡ ಕುಸಿದು ಬಿದ್ದಿರುವ ಪ್ರದೇಶ, ದುಸ್ಥಿತಿಯಲ್ಲಿರುವ ಮಳಿಗೆಗಳು, ಹಣ್ಣು ಅಂಗಡಿಗಳ ಮಾರ್ಗ, ತರಕಾರಿ ಮಳಿಗೆಗಳ ಮಾರ್ಗ ಇನ್ನಿತರೆ ಮಳಿಗೆಗಳ ವಿಡಿಯೋ ಹಾಗೂ ಫೊಟೋಗಳನ್ನು ಕ್ಲಿಕ್ಕಿಸಿಕೊಂಡರು. ಕಳೆದ ವಾರವೂ ಲ್ಯಾನ್ಸ್ಡೌನ್ ಕಟ್ಟಡವನ್ನು ಪರಿಶೀಲಿಸಿ ಅಧ್ಯಯನ ನಡೆಸಿದ್ದ ಇಂಟಾಚ್ ತಂಡ ಶೀಘ್ರದಲ್ಲೇ ಸುಪ್ರೀಂಕೋರ್ಟ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಲಿದೆ.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…