ಕಳೆದ ಬಾರಿಗಿಂತ 4 ಕ್ಷೇತ್ರ ಹೆಚ್ಚಳ, ನಂಜನಗೂಡು ತಾಲ್ಲೂಕಿನಲ್ಲಿ 9 ಕ್ಷೇತ್ರಗಳು
ಮೈಸೂರು: ಅವಧಿ ಮುಗಿದು ವರ್ಷವೇ ಕಳೆದರೂ ಜಿಪಂ, ತಾಪಂ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸಿದ್ದ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬಳಿಕ ಕೊನೆಗೂ ಎಚ್ಚೆತ್ತ ಸರ್ಕಾರ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಜಿಪಂ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.
ಮೈಸೂರು ಜಿಲ್ಲೆಯಲ್ಲಿ 46 ಏಕ ಸದಸ್ಯ ಸ್ಥಾನಗಳು ನಿಗದಿಯಾಗಿ ದೆ. ಕಳೆದ ಬಾರಿ 42 ಸದಸ್ಯ ಸ್ಥಾನಗಳನ್ನು ಹೊಂದಿದ್ದ ಮೈಸೂರು ಜಿಲ್ಲೆಯಲ್ಲಿ 46 ಕ್ಷೇತ್ರಗಳು ನಿಗದಿಯಾಗಿ ನಾಲ್ಕು ಹೆಚ್ಚುವರಿ ಕ್ಷೇತ್ರಗಳು ರಚನೆಯಾಗಿವೆ. ಸರಗೂರು-2, ಕೃಷ್ಣರಾಜ ನಗರ-3, ಸಾಲಿಗ್ರಾಮ-4, ಹೆಗ್ಗಡದೇವನ ಕೋಟೆ-4, ಪಿರಿಯಾಪಟ್ಟಣ-6, ಹುಣಸೂರು-6, ಮೈಸೂರು-6, ತಿ.ನರಸೀಪುರ-6, ನಂಜನಗೂಡು ತಾಲ್ಲೂಕಿನಲ್ಲಿ 9 ಸದಸ್ಯ ಸ್ಥಾನಗಳು ರಚನೆಯಾಗಿದ್ದು, ಸಣ್ಣಪುಟ್ಟ ವ್ಯತ್ಯಾಸ ಸರಿಪಡಿಸಿ ಅಧಿಸೂಚನೆ ಪ್ರಕಟಿಸಲಾಗಿದೆ.
ಮೈಸೂರು ತಾಲ್ಲೂಕು: ಇಲವಾಲ, ಜಯಪುರ, ಉದ್ಭೂರು, ವರುಣ, ಸಿದ್ದಲಿಂಗಪುರ, ಹಾರೋಹಳ್ಳಿ(ಮೆಲ್ಲಹಳ್ಳಿ).
ತಿ.ನರಸೀಪುರ ತಾಲ್ಲೂಕು: ತುರಗನೂರು, ಸೋಮನಾಥಪುರ, ಸೋಸಲೆ, ತಲಕಾಡು, ಮೂಗೂರು, ಗರ್ಗೇಶ್ವರಿ.
ನಂಜನಗೂಡು ತಾಲ್ಲೂಕು: ಹುರಾ, ಹುಲ್ಲಹಳ್ಳಿ, ಹೆಗ್ಗಡಹಳ್ಳಿ, ಕಳಲೆ, ಬದನವಾಳು, ದೊಡ್ಡ ಕವಲಂದೆ, ತಗಡೂರು, ಹದಿನಾರು, ತಾಂಡವಪುರ.
ಹುಣಸೂರು ತಾಲ್ಲೂಕು: ಗಾವಡಗೆರೆ, ಬನ್ನಿಕುಪ್ಪೆ, ಬಿಳಿಕೆರೆ, ಧರ್ಮಾಪುರ, ಹನಗೋಡು, ಚಿಲ್ಕುಂದ. ಕೆ.ಆರ್.ನಗರ ತಾಲ್ಲೂಕು: ಗಂಧನಹಳ್ಳಿ, ತಿಪ್ಪೂರು, ಹೆಬ್ಬಾಳು. ಸಾಲಿಗ್ರಾಮ ತಾಲ್ಲೂಕು: ತಂದ್ರೆ, ಮಿರ್ಲೆ, ಸಾಲಿಗ್ರಾಮ, ಹಳಯೂರು. ಪಿರಿಯಾಪಟ್ಟಣ ತಾಲ್ಲೂಕು: ಹಲಗನಹಳ್ಳಿ, ಬೆಟ್ಟದಪುರ, ರಾವಂದೂರು, ಕಂಪಲಾಪುರ, ಆಲನಹಳ್ಳಿ, ಕೊಪ್ಪ.
ಎಚ್.ಡಿ.ಕೋಟೆ ತಾಲ್ಲೂಕು: ಹಂಪಾಪುರ, ಹೈರಿಗೆ, ಅಣ್ಣೂರು, ಅಂತರಸಂತೆ.
ಸರಗೂರು ತಾಲ್ಲೂಕು: ಮುಳ್ಳೂರು, ಸರಗೂರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…