ಮೈಸೂರು

ಮೈಸೂರು ಜಿಪಂಗೆ 46 ಸದಸ್ಯ ಸ್ಥಾನಗಳು ನಿಗದಿ

ಕಳೆದ ಬಾರಿಗಿಂತ 4 ಕ್ಷೇತ್ರ ಹೆಚ್ಚಳ, ನಂಜನಗೂಡು ತಾಲ್ಲೂಕಿನಲ್ಲಿ 9 ಕ್ಷೇತ್ರಗಳು

ಮೈಸೂರು: ಅವಧಿ ಮುಗಿದು ವರ್ಷವೇ ಕಳೆದರೂ ಜಿಪಂ, ತಾಪಂ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸಿದ್ದ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬಳಿಕ ಕೊನೆಗೂ ಎಚ್ಚೆತ್ತ ಸರ್ಕಾರ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಜಿಪಂ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.
ಮೈಸೂರು ಜಿಲ್ಲೆಯಲ್ಲಿ 46 ಏಕ ಸದಸ್ಯ ಸ್ಥಾನಗಳು ನಿಗದಿಯಾಗಿ ದೆ. ಕಳೆದ ಬಾರಿ 42 ಸದಸ್ಯ ಸ್ಥಾನಗಳನ್ನು ಹೊಂದಿದ್ದ ಮೈಸೂರು ಜಿಲ್ಲೆಯಲ್ಲಿ 46 ಕ್ಷೇತ್ರಗಳು ನಿಗದಿಯಾಗಿ ನಾಲ್ಕು ಹೆಚ್ಚುವರಿ ಕ್ಷೇತ್ರಗಳು ರಚನೆಯಾಗಿವೆ. ಸರಗೂರು-2, ಕೃಷ್ಣರಾಜ ನಗರ-3, ಸಾಲಿಗ್ರಾಮ-4, ಹೆಗ್ಗಡದೇವನ ಕೋಟೆ-4, ಪಿರಿಯಾಪಟ್ಟಣ-6, ಹುಣಸೂರು-6, ಮೈಸೂರು-6, ತಿ.ನರಸೀಪುರ-6, ನಂಜನಗೂಡು ತಾಲ್ಲೂಕಿನಲ್ಲಿ 9 ಸದಸ್ಯ ಸ್ಥಾನಗಳು ರಚನೆಯಾಗಿದ್ದು, ಸಣ್ಣಪುಟ್ಟ ವ್ಯತ್ಯಾಸ ಸರಿಪಡಿಸಿ ಅಧಿಸೂಚನೆ ಪ್ರಕಟಿಸಲಾಗಿದೆ.

ಮೈಸೂರು ತಾಲ್ಲೂಕು: ಇಲವಾಲ, ಜಯಪುರ, ಉದ್ಭೂರು, ವರುಣ, ಸಿದ್ದಲಿಂಗಪುರ, ಹಾರೋಹಳ್ಳಿ(ಮೆಲ್ಲಹಳ್ಳಿ).
ತಿ.ನರಸೀಪುರ ತಾಲ್ಲೂಕು: ತುರಗನೂರು, ಸೋಮನಾಥಪುರ, ಸೋಸಲೆ, ತಲಕಾಡು, ಮೂಗೂರು, ಗರ್ಗೇಶ್ವರಿ.
ನಂಜನಗೂಡು ತಾಲ್ಲೂಕು: ಹುರಾ, ಹುಲ್ಲಹಳ್ಳಿ, ಹೆಗ್ಗಡಹಳ್ಳಿ, ಕಳಲೆ, ಬದನವಾಳು, ದೊಡ್ಡ ಕವಲಂದೆ, ತಗಡೂರು, ಹದಿನಾರು, ತಾಂಡವಪುರ.

ಹುಣಸೂರು ತಾಲ್ಲೂಕು: ಗಾವಡಗೆರೆ, ಬನ್ನಿಕುಪ್ಪೆ, ಬಿಳಿಕೆರೆ, ಧರ್ಮಾಪುರ, ಹನಗೋಡು, ಚಿಲ್ಕುಂದ.                                   ಕೆ.ಆರ್.ನಗರ ತಾಲ್ಲೂಕು: ಗಂಧನಹಳ್ಳಿ, ತಿಪ್ಪೂರು, ಹೆಬ್ಬಾಳು. ಸಾಲಿಗ್ರಾಮ ತಾಲ್ಲೂಕು: ತಂದ್ರೆ, ಮಿರ್ಲೆ, ಸಾಲಿಗ್ರಾಮ, ಹಳಯೂರು. ಪಿರಿಯಾಪಟ್ಟಣ ತಾಲ್ಲೂಕು: ಹಲಗನಹಳ್ಳಿ, ಬೆಟ್ಟದಪುರ, ರಾವಂದೂರು, ಕಂಪಲಾಪುರ, ಆಲನಹಳ್ಳಿ, ಕೊಪ್ಪ.
ಎಚ್.ಡಿ.ಕೋಟೆ ತಾಲ್ಲೂಕು: ಹಂಪಾಪುರ, ಹೈರಿಗೆ, ಅಣ್ಣೂರು, ಅಂತರಸಂತೆ.
ಸರಗೂರು ತಾಲ್ಲೂಕು: ಮುಳ್ಳೂರು, ಸರಗೂರು.

andolana

Recent Posts

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

7 mins ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

31 mins ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

49 mins ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

56 mins ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

59 mins ago

ಕೆಟ್ಟುನಿಂತ ಬೀದಿ ದೀಪಗಳು ; ಕಗ್ಗತ್ತಲಲ್ಲಿ ರಸ್ತೆಗಳು

ಪ್ರಶಾಂತ್‌ ಎಸ್.‌ ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…

1 hour ago