ಮೈಸೂರು

ಮೈಸೂರು ಜಿಪಂಗೆ 46 ಸದಸ್ಯ ಸ್ಥಾನಗಳು ನಿಗದಿ

ಕಳೆದ ಬಾರಿಗಿಂತ 4 ಕ್ಷೇತ್ರ ಹೆಚ್ಚಳ, ನಂಜನಗೂಡು ತಾಲ್ಲೂಕಿನಲ್ಲಿ 9 ಕ್ಷೇತ್ರಗಳು

ಮೈಸೂರು: ಅವಧಿ ಮುಗಿದು ವರ್ಷವೇ ಕಳೆದರೂ ಜಿಪಂ, ತಾಪಂ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸಿದ್ದ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬಳಿಕ ಕೊನೆಗೂ ಎಚ್ಚೆತ್ತ ಸರ್ಕಾರ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಜಿಪಂ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.
ಮೈಸೂರು ಜಿಲ್ಲೆಯಲ್ಲಿ 46 ಏಕ ಸದಸ್ಯ ಸ್ಥಾನಗಳು ನಿಗದಿಯಾಗಿ ದೆ. ಕಳೆದ ಬಾರಿ 42 ಸದಸ್ಯ ಸ್ಥಾನಗಳನ್ನು ಹೊಂದಿದ್ದ ಮೈಸೂರು ಜಿಲ್ಲೆಯಲ್ಲಿ 46 ಕ್ಷೇತ್ರಗಳು ನಿಗದಿಯಾಗಿ ನಾಲ್ಕು ಹೆಚ್ಚುವರಿ ಕ್ಷೇತ್ರಗಳು ರಚನೆಯಾಗಿವೆ. ಸರಗೂರು-2, ಕೃಷ್ಣರಾಜ ನಗರ-3, ಸಾಲಿಗ್ರಾಮ-4, ಹೆಗ್ಗಡದೇವನ ಕೋಟೆ-4, ಪಿರಿಯಾಪಟ್ಟಣ-6, ಹುಣಸೂರು-6, ಮೈಸೂರು-6, ತಿ.ನರಸೀಪುರ-6, ನಂಜನಗೂಡು ತಾಲ್ಲೂಕಿನಲ್ಲಿ 9 ಸದಸ್ಯ ಸ್ಥಾನಗಳು ರಚನೆಯಾಗಿದ್ದು, ಸಣ್ಣಪುಟ್ಟ ವ್ಯತ್ಯಾಸ ಸರಿಪಡಿಸಿ ಅಧಿಸೂಚನೆ ಪ್ರಕಟಿಸಲಾಗಿದೆ.

ಮೈಸೂರು ತಾಲ್ಲೂಕು: ಇಲವಾಲ, ಜಯಪುರ, ಉದ್ಭೂರು, ವರುಣ, ಸಿದ್ದಲಿಂಗಪುರ, ಹಾರೋಹಳ್ಳಿ(ಮೆಲ್ಲಹಳ್ಳಿ).
ತಿ.ನರಸೀಪುರ ತಾಲ್ಲೂಕು: ತುರಗನೂರು, ಸೋಮನಾಥಪುರ, ಸೋಸಲೆ, ತಲಕಾಡು, ಮೂಗೂರು, ಗರ್ಗೇಶ್ವರಿ.
ನಂಜನಗೂಡು ತಾಲ್ಲೂಕು: ಹುರಾ, ಹುಲ್ಲಹಳ್ಳಿ, ಹೆಗ್ಗಡಹಳ್ಳಿ, ಕಳಲೆ, ಬದನವಾಳು, ದೊಡ್ಡ ಕವಲಂದೆ, ತಗಡೂರು, ಹದಿನಾರು, ತಾಂಡವಪುರ.

ಹುಣಸೂರು ತಾಲ್ಲೂಕು: ಗಾವಡಗೆರೆ, ಬನ್ನಿಕುಪ್ಪೆ, ಬಿಳಿಕೆರೆ, ಧರ್ಮಾಪುರ, ಹನಗೋಡು, ಚಿಲ್ಕುಂದ.                                   ಕೆ.ಆರ್.ನಗರ ತಾಲ್ಲೂಕು: ಗಂಧನಹಳ್ಳಿ, ತಿಪ್ಪೂರು, ಹೆಬ್ಬಾಳು. ಸಾಲಿಗ್ರಾಮ ತಾಲ್ಲೂಕು: ತಂದ್ರೆ, ಮಿರ್ಲೆ, ಸಾಲಿಗ್ರಾಮ, ಹಳಯೂರು. ಪಿರಿಯಾಪಟ್ಟಣ ತಾಲ್ಲೂಕು: ಹಲಗನಹಳ್ಳಿ, ಬೆಟ್ಟದಪುರ, ರಾವಂದೂರು, ಕಂಪಲಾಪುರ, ಆಲನಹಳ್ಳಿ, ಕೊಪ್ಪ.
ಎಚ್.ಡಿ.ಕೋಟೆ ತಾಲ್ಲೂಕು: ಹಂಪಾಪುರ, ಹೈರಿಗೆ, ಅಣ್ಣೂರು, ಅಂತರಸಂತೆ.
ಸರಗೂರು ತಾಲ್ಲೂಕು: ಮುಳ್ಳೂರು, ಸರಗೂರು.

andolana

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

2 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

2 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

2 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

8 hours ago