ಮೈಸೂರು

ಮೈಸೂರು ಜಿಪಂಗೆ 46 ಸದಸ್ಯ ಸ್ಥಾನಗಳು ನಿಗದಿ

ಕಳೆದ ಬಾರಿಗಿಂತ 4 ಕ್ಷೇತ್ರ ಹೆಚ್ಚಳ, ನಂಜನಗೂಡು ತಾಲ್ಲೂಕಿನಲ್ಲಿ 9 ಕ್ಷೇತ್ರಗಳು

ಮೈಸೂರು: ಅವಧಿ ಮುಗಿದು ವರ್ಷವೇ ಕಳೆದರೂ ಜಿಪಂ, ತಾಪಂ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸಿದ್ದ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬಳಿಕ ಕೊನೆಗೂ ಎಚ್ಚೆತ್ತ ಸರ್ಕಾರ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಜಿಪಂ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.
ಮೈಸೂರು ಜಿಲ್ಲೆಯಲ್ಲಿ 46 ಏಕ ಸದಸ್ಯ ಸ್ಥಾನಗಳು ನಿಗದಿಯಾಗಿ ದೆ. ಕಳೆದ ಬಾರಿ 42 ಸದಸ್ಯ ಸ್ಥಾನಗಳನ್ನು ಹೊಂದಿದ್ದ ಮೈಸೂರು ಜಿಲ್ಲೆಯಲ್ಲಿ 46 ಕ್ಷೇತ್ರಗಳು ನಿಗದಿಯಾಗಿ ನಾಲ್ಕು ಹೆಚ್ಚುವರಿ ಕ್ಷೇತ್ರಗಳು ರಚನೆಯಾಗಿವೆ. ಸರಗೂರು-2, ಕೃಷ್ಣರಾಜ ನಗರ-3, ಸಾಲಿಗ್ರಾಮ-4, ಹೆಗ್ಗಡದೇವನ ಕೋಟೆ-4, ಪಿರಿಯಾಪಟ್ಟಣ-6, ಹುಣಸೂರು-6, ಮೈಸೂರು-6, ತಿ.ನರಸೀಪುರ-6, ನಂಜನಗೂಡು ತಾಲ್ಲೂಕಿನಲ್ಲಿ 9 ಸದಸ್ಯ ಸ್ಥಾನಗಳು ರಚನೆಯಾಗಿದ್ದು, ಸಣ್ಣಪುಟ್ಟ ವ್ಯತ್ಯಾಸ ಸರಿಪಡಿಸಿ ಅಧಿಸೂಚನೆ ಪ್ರಕಟಿಸಲಾಗಿದೆ.

ಮೈಸೂರು ತಾಲ್ಲೂಕು: ಇಲವಾಲ, ಜಯಪುರ, ಉದ್ಭೂರು, ವರುಣ, ಸಿದ್ದಲಿಂಗಪುರ, ಹಾರೋಹಳ್ಳಿ(ಮೆಲ್ಲಹಳ್ಳಿ).
ತಿ.ನರಸೀಪುರ ತಾಲ್ಲೂಕು: ತುರಗನೂರು, ಸೋಮನಾಥಪುರ, ಸೋಸಲೆ, ತಲಕಾಡು, ಮೂಗೂರು, ಗರ್ಗೇಶ್ವರಿ.
ನಂಜನಗೂಡು ತಾಲ್ಲೂಕು: ಹುರಾ, ಹುಲ್ಲಹಳ್ಳಿ, ಹೆಗ್ಗಡಹಳ್ಳಿ, ಕಳಲೆ, ಬದನವಾಳು, ದೊಡ್ಡ ಕವಲಂದೆ, ತಗಡೂರು, ಹದಿನಾರು, ತಾಂಡವಪುರ.

ಹುಣಸೂರು ತಾಲ್ಲೂಕು: ಗಾವಡಗೆರೆ, ಬನ್ನಿಕುಪ್ಪೆ, ಬಿಳಿಕೆರೆ, ಧರ್ಮಾಪುರ, ಹನಗೋಡು, ಚಿಲ್ಕುಂದ.                                   ಕೆ.ಆರ್.ನಗರ ತಾಲ್ಲೂಕು: ಗಂಧನಹಳ್ಳಿ, ತಿಪ್ಪೂರು, ಹೆಬ್ಬಾಳು. ಸಾಲಿಗ್ರಾಮ ತಾಲ್ಲೂಕು: ತಂದ್ರೆ, ಮಿರ್ಲೆ, ಸಾಲಿಗ್ರಾಮ, ಹಳಯೂರು. ಪಿರಿಯಾಪಟ್ಟಣ ತಾಲ್ಲೂಕು: ಹಲಗನಹಳ್ಳಿ, ಬೆಟ್ಟದಪುರ, ರಾವಂದೂರು, ಕಂಪಲಾಪುರ, ಆಲನಹಳ್ಳಿ, ಕೊಪ್ಪ.
ಎಚ್.ಡಿ.ಕೋಟೆ ತಾಲ್ಲೂಕು: ಹಂಪಾಪುರ, ಹೈರಿಗೆ, ಅಣ್ಣೂರು, ಅಂತರಸಂತೆ.
ಸರಗೂರು ತಾಲ್ಲೂಕು: ಮುಳ್ಳೂರು, ಸರಗೂರು.

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago