ಮೈಸೂರು

ಮೈಸೂರು | ಸುಗಮವಾಗಿ ನಡೆದ ಕೆ-ಸೆಟ್‌ ಪರೀಕ್ಷೆ

ಮೈಸೂರು : ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ(ಕೆ-ಸೆಟ್)‌ ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು.

ಕೆ-ಸೆಟ್ ಪರೀಕ್ಷೆಗೆ 18674 ಮಂದಿ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಆದರೆ, ಭಾನುವಾರ ನಡೆದ ಪರೀಕ್ಷೆಯಲ್ಲಿ 17038 ಮಂದಿ ಹಾಜರಾಗಿದ್ದು, 1636 ಮಂದಿ ಅಭ್ಯರ್ಥಿಗಳು ಗೈರಾಗಿದ್ದರು.

ಡಿ.ಬನುಮಯ್ಯ ಪದವಿ ಪೂರ್ವ ಕಾಲೇಜು, ಮಹಾರಾಣಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ವಿಜ್ಞಾನ ಪದವಿ ಕಾಲೇಜು, ಮಹಾರಾಜ ಸರ್ಕಾರಿ ಕಾಲೇಜು, ದೇವರಾಜ ಬಾಲಕಿಯರ ಕಾಲೇಜು, ಮರಿಮಲ್ಲಪ್ಪ ಪದವಿ ಕಾಲೇಜು, ಸರ್ಕಾರಿ ಆದರ್ಶ ವಿದ್ಯಾಲಯ, ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು,ಮಹಾಜನ ಕಾಲೇಜು ಸೇರಿದಂತೆ 41 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ಗಂಟೆಯ ತನಕ ನಡೆಯಿತು. ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷಾ ಕೇಂದ್ರದ ಒಳಗೆ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಅವಕಾಶ ನೀಡಿರಲಿಲ್ಲ.

ವಿವಿಧ ಕೇಂದ್ರಗಳಿಗೆ ಭೇಟಿ
ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನೋಡೆಲ್ ಅಧಿಕಾರಿಗಳೂ ಆಗಿರುವ ಎಡಿಸಿ, ಮಹಾರಾಜ ಪಿಯು ಕಾಲೇಜು,ಮರಿಮಲ್ಲಪ್ಪ ಕಾಲೇಜು,ಸೆಂಟ್ ಫಿಲೋಮಿನಾ ಕಾಲೇಜು ಕೇಂದ್ರಗಳಿಗೆ ತೆರಳಿ ಪರಿಶೀಲಿಸಿ ಮೇಲ್ವಿಚಾರಕರಿಂದ ಮಾಹಿತಿ ಪಡೆದರು.

ಆಂದೋಲನ ಡೆಸ್ಕ್

Recent Posts

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

27 mins ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

1 hour ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

6 hours ago